September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪತಿ ಸಭಾಭವನ ಪಡಂಗಡಿಯಲ್ಲಿ ಫಾದರ್ ಎಲ್.ಎಂ. ಪಿಂಟೋ ಆಸ್ಪತ್ರೆ ಬದ್ಯಾರ್ ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಶ್ರೀ ಗಣೇಶೋತ್ಸವ ಸಮಿತಿ ಪಡಂಗಡಿ ಗ್ರಾ.ಪಂ. ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡಂಗಡಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅ.19 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸನಾ ಶಿಬಿರ ನಡೆಯಿತು.

ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಉದ್ಘಾಟಿಸಿ ಉದ್ಘಾಟನಾ ಭಾಷಣ ಮಾಡಿ ಶಿಬಿರದ ಯಶಸ್ವಿಗೆ ಶುಭ ಹಾರೈಸಿದರು. ಫಾದರ್ ಎಲ್ ಎಂ ಪಿಂಟೋ ಆಸ್ಪತ್ರೆ ಬದ್ಯಾರ್ ಇದರ ಆಡಳಿತಾಧಿಕಾರಿಯವರು ಶಿಬಿರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಹರೀಶ್ ಪೂಂಜಾ ಇವರು ಶಿಬಿರದ ಬಗ್ಗೆ ಮಾತನಾಡಿ ನಾವೆಲ್ಲ ಕನಿಷ್ಠ ವರ್ಷದಲ್ಲಿ 100 ದಿನವಾದರೂ ಮನೆಯಲ್ಲೇ ಬೆಳೆಸಿದ ತರಕಾರಿಗಳನ್ನು ಉಪಯೋಗಿಸುವ ಸಂಕಲ್ಪ ಮಾಡಬೇಕು ಇದರಿಂದ ನಮ್ಮ ಆರೋಗ್ಯವನ್ನು ಕಾಪಾಡಲು ನಾವು ಶ್ರಮಿಸಬೇಕೆಂದು ಹಿತ ನುಡಿದು ಶಿಬಿರದ ಯಶಸ್ವಿಗೆ ಹಾರೈಸಿದರು. ಸದಸ್ಯ ಸಂತೋಷ ಕುಮಾರ್ ಜೈನ್ ಮಾತನಾಡಿ ಎಲ್ಲಾ ಸಂಪತ್ತಿಂಗಿತಲು ಮಿಗಿಲಾದ ಸಂಪತ್ತು ಅದು ಆರೋಗ್ಯ ಅದನ್ನು ಕಾಪಾಡಿ ನೆಮ್ಮದಿಯ ಜೀವನವನ್ನು ಸಾಗಿಸಬೇಕೆಂಬ ಹಿತನುಡಿಯೊಂದಿಗೆ ಶಿಬಿರದ ಯಶಸ್ವಿಗಾಗಿ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ ಸ್ವಾಗತಿಸಿ, ಎಲ್ ಎಂ ಆಸ್ಪತ್ರೆ ಸಿಬ್ಬಂದಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
error: Content is protected !!