July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯನ್ನು ಅ.18 ರಂದು ಆಯೋಜಿಸಲಾಗಿತ್ತು.

ರಕ್ಷಕ – ಶಿಕ್ಷಕ ಸಂಘದ 2024 – 25 ನೇ ಸಾಲಿನ ವರದಿ ಮತ್ತು ಲೆಕ್ಕಪತ್ರವನ್ನು ರಕ್ಷಕ – ಶಿಕ್ಷಕ ಸಂಘದ ಸಂಚಾಲಕ ಪ್ರೊ. ಸಂತೋಷ್ ಪ್ರಭು .ಎಮ್ ಮಂಡಿಸಿದರು. ನಂತರ 2024 – 25 ನೇ ಸಾಲಿನಲ್ಲಿ ಕಾಲೇಜಿನ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಕಾಲೇಜಿನ 2024 – 25 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ಶ್ಯಾಮರಾವ್ ಉಂಡೆಮನೆ ಇವರ ಅಮೂಲ್ಯ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು. ನಂತರ 2025 -26ನೇ ಸಾಲಿನ ನೂತನ ರಕ್ಷಕ ಶಿಕ್ಷಕ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಗಣೇಶ ಆಚಾರ್ಯ ಆಯ್ಕೆಯಾದರು.


ಮುಖ್ಯ ಅತಿಥಿಗಳಾಗಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಇದರ ನಿರ್ದೇಶಕರಾದ ಪ್ರೊ.ಸೀತಾರಾಮ ಕೇವಳ ಮಾತನಾಡಿ “ಮಕ್ಕಳ ಜೀವನವನ್ನು ರೂಪಿಸುವಲ್ಲಿ ಪೋಷಕರ ಪಾತ್ರ”, ಹಾಗೂ “ಸಹಕಾರದಿಂದಲೇ ಸಾಧನೆ” ಎಂದು ಪೋಷಕರ ಮನಮುಟ್ಟುವ ಪ್ರೇರಣಾದಾಯಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷ ಪ್ರೊ.ಮಾಧವ ಅವರು ಕಾಲೇಜಿನ ಅಭಿವೃದ್ಧಿಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಹಕಾರವನ್ನು ಉಲ್ಲೇಖಿಸಿ, ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ರಕ್ಷಕ – ಶಿಕ್ಷಕ ಸಂಘದ ಸಂಚಾಲಕರಾದ ಪ್ರೊ. ಸಂತೋಷ್ ಪ್ರಭು.ಎಮ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ವೈಶಾಲಿ .ಯು ,ಐಕ್ಯೂಎಸಿ ಸಂಚಾಲಕರಾದ ಡಾ. ಅವಿತಾ ಮರಿಯಾ ಕ್ವಾಡ್ರಸ್, ರಕ್ಷಕ – ಶಿಕ್ಷಕ ಸಂಘದ ಸಹ ಸಂಚಾಲಕರಾದ ಪ್ರೊ. ಪ್ರವೀಣ್ ಇವರು ಉಪಸ್ಥಿತರಿದ್ದರು.


ಐಕ್ಯೂಎಸಿ ಸಂಚಾಲಕರಾದ ಡಾ. ಅವಿತಾ ಮರಿಯಾ ಕ್ವಾಡ್ರಸ್ ಸ್ವಾಗತಿಸಿ , ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ವೈಶಾಲಿ. ಯು ವಂದಿಸಿದರು. ಹಾಗೂ ಸಾಂಸ್ಕೃತಿಕ ಸಂಘದ ಸಂಚಾಲಕರಾದ ಪ್ರೊ. ರೇಖಾ ಯು.ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya
error: Content is protected !!