ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

ಮುಂಡಾಜೆ : ಕೀರ್ತನಾ ಕಲಾತಂಡ ಮುಂಡಾಜೆ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತಂಡದ ಸದಸ್ಯರಿಗೆ ಅವಲಕ್ಕಿ– ಬೆಲ್ಲ ವಿತರಣೆ ಕಾರ್ಯಕ್ರಮ ಅ.19 ರಂದು ಗ್ರಾಮ ಪಂಚಾಯತ್ ಮುಂಡಾಜೆ ಸಭಾ ಭವನದಲ್ಲಿ
ತಂಡದ ಅಧ್ಯಕ್ಷರಾದ ಸದಾನಂದ ಬಿ ಮುಂಡಾಜೆ ಇವರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮಕ್ಕೆ ರಾಮಣ್ಣ ಶೆಟ್ಟಿ ಅಗರಿ, ಬಾಬು ಪೂಜಾರಿ ಕೂಳೂರು ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಮಧು ಶೆಟ್ಟಿ ಹುರ್ತಾಜೆ ಅಧ್ಯಕ್ಷೀಯ ಮಾತನ್ನಾಡಿದರು. ಕಾರ್ಯಕ್ರಮದಲ್ಲಿ ಉಮೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ ನಾಗಂಡ, ಲೀಲಾವತಿ ನಾಯ್ಕ, ಪುರಂದರ ಗೌಡ, ಚಂದ್ರ ಶೇಖರ ಗೌಡ, ಮನೋಹರ ನಾಯ್ಕ, ಸದಾಶಿವ ನಾಯ್ಕ ಪಣಿಕಲ್ಲು, ನಂದೀಶ್ ಭಂಡಾರಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತೆಂಕು ತಿಟ್ಟಿನ ಶ್ರೇಷ್ಠ ಭಾಗವತರಾದ ದಿನೇಶ್ ಅಮ್ಮಣ್ಣಾಯರಿಗೆ ನುಡಿನಮನ ಸಲ್ಲಿಸಿ ಮೌನ ಪ್ರಾರ್ಥನೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕುಮಾರಿ ಜೀತಿಕ್ಷಾ ಸ್ವಾಗತಿಸಿ, ಕೇಶವ ಮುಂಡಾಜೆ ಧನ್ಯವಾದ ನೀಡಿದರು. ಸದಾನಂದ ಬಿ ಮುಂಡಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!