25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

ಮುಂಡಾಜೆ : ಕೀರ್ತನಾ ಕಲಾತಂಡ ಮುಂಡಾಜೆ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತಂಡದ ಸದಸ್ಯರಿಗೆ ಅವಲಕ್ಕಿ– ಬೆಲ್ಲ ವಿತರಣೆ ಕಾರ್ಯಕ್ರಮ ಅ.19 ರಂದು ಗ್ರಾಮ ಪಂಚಾಯತ್ ಮುಂಡಾಜೆ ಸಭಾ ಭವನದಲ್ಲಿ
ತಂಡದ ಅಧ್ಯಕ್ಷರಾದ ಸದಾನಂದ ಬಿ ಮುಂಡಾಜೆ ಇವರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮಕ್ಕೆ ರಾಮಣ್ಣ ಶೆಟ್ಟಿ ಅಗರಿ, ಬಾಬು ಪೂಜಾರಿ ಕೂಳೂರು ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಮಧು ಶೆಟ್ಟಿ ಹುರ್ತಾಜೆ ಅಧ್ಯಕ್ಷೀಯ ಮಾತನ್ನಾಡಿದರು. ಕಾರ್ಯಕ್ರಮದಲ್ಲಿ ಉಮೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ ನಾಗಂಡ, ಲೀಲಾವತಿ ನಾಯ್ಕ, ಪುರಂದರ ಗೌಡ, ಚಂದ್ರ ಶೇಖರ ಗೌಡ, ಮನೋಹರ ನಾಯ್ಕ, ಸದಾಶಿವ ನಾಯ್ಕ ಪಣಿಕಲ್ಲು, ನಂದೀಶ್ ಭಂಡಾರಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತೆಂಕು ತಿಟ್ಟಿನ ಶ್ರೇಷ್ಠ ಭಾಗವತರಾದ ದಿನೇಶ್ ಅಮ್ಮಣ್ಣಾಯರಿಗೆ ನುಡಿನಮನ ಸಲ್ಲಿಸಿ ಮೌನ ಪ್ರಾರ್ಥನೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕುಮಾರಿ ಜೀತಿಕ್ಷಾ ಸ್ವಾಗತಿಸಿ, ಕೇಶವ ಮುಂಡಾಜೆ ಧನ್ಯವಾದ ನೀಡಿದರು. ಸದಾನಂದ ಬಿ ಮುಂಡಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya
error: Content is protected !!