July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

ಮುಂಡಾಜೆ : ಕೀರ್ತನಾ ಕಲಾತಂಡ ಮುಂಡಾಜೆ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತಂಡದ ಸದಸ್ಯರಿಗೆ ಅವಲಕ್ಕಿ– ಬೆಲ್ಲ ವಿತರಣೆ ಕಾರ್ಯಕ್ರಮ ಅ.19 ರಂದು ಗ್ರಾಮ ಪಂಚಾಯತ್ ಮುಂಡಾಜೆ ಸಭಾ ಭವನದಲ್ಲಿ
ತಂಡದ ಅಧ್ಯಕ್ಷರಾದ ಸದಾನಂದ ಬಿ ಮುಂಡಾಜೆ ಇವರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮಕ್ಕೆ ರಾಮಣ್ಣ ಶೆಟ್ಟಿ ಅಗರಿ, ಬಾಬು ಪೂಜಾರಿ ಕೂಳೂರು ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಮಧು ಶೆಟ್ಟಿ ಹುರ್ತಾಜೆ ಅಧ್ಯಕ್ಷೀಯ ಮಾತನ್ನಾಡಿದರು. ಕಾರ್ಯಕ್ರಮದಲ್ಲಿ ಉಮೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ ನಾಗಂಡ, ಲೀಲಾವತಿ ನಾಯ್ಕ, ಪುರಂದರ ಗೌಡ, ಚಂದ್ರ ಶೇಖರ ಗೌಡ, ಮನೋಹರ ನಾಯ್ಕ, ಸದಾಶಿವ ನಾಯ್ಕ ಪಣಿಕಲ್ಲು, ನಂದೀಶ್ ಭಂಡಾರಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತೆಂಕು ತಿಟ್ಟಿನ ಶ್ರೇಷ್ಠ ಭಾಗವತರಾದ ದಿನೇಶ್ ಅಮ್ಮಣ್ಣಾಯರಿಗೆ ನುಡಿನಮನ ಸಲ್ಲಿಸಿ ಮೌನ ಪ್ರಾರ್ಥನೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕುಮಾರಿ ಜೀತಿಕ್ಷಾ ಸ್ವಾಗತಿಸಿ, ಕೇಶವ ಮುಂಡಾಜೆ ಧನ್ಯವಾದ ನೀಡಿದರು. ಸದಾನಂದ ಬಿ ಮುಂಡಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya
error: Content is protected !!