ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

ಬೆಂಗಳೂರು ವಿಶ್ವವಿದ್ಯಾಲಯದ 2022–24ನೇ ಸಾಲಿನ ಶಿಕ್ಷಣ ಸ್ನಾತಕೋತ್ತರ (Master of Education) ವಿಭಾಗದಲ್ಲಿ ನೈನಾಡಿನ ಚೇತನಾ ಅವರು ನಾಲ್ಕು ಚಿನ್ನದ ಪದಕಗಳನ್ನು ಗೆದ್ದು, ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಈ ಗೌರವವನ್ನು ಅವರು ಬೆಂಗಳೂರು ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 60ನೇ ವಾರ್ಷಿಕ ದೀಕ್ಷಾಂತ ಸಮಾರಂಭದಲ್ಲಿ ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಕುಲಸಚಿವರಾದ ಡಾ. ಎಸ್.ಎಂ. ಜಯಕಾರ, ಪ್ರೋಕುಲಪತಿಗಳಾದ ಡಾ. ಸಿ.ಎಂ. ಸುಧಾಕರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಶ್ರೀಮತಿ ಚೇತನಾ ಕರುಣಾಕರವರು ನೈನಾಡಿನ ಶಿವಪ್ಪ ಮೂಲ್ಯ ಮತ್ತು ಪುಷ್ಪಾವತಿ ದಂಪತಿಗಳ ಸುಪುತ್ರಿಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುತ್ತಾರೆ.

Related posts

ಅಳದಂಗಡಿ ಸಂಪರ್ಕ ರಸ್ತೆಯಲ್ಲಿ ಮತ್ತೆ ಉರುಳಿ ಬಿದ್ದ ಮರ: ಪರದಾಡಿದ ಶಾಲಾ ಮಕ್ಕಳು

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶ್ರೀ ಮಂಜುನಾಥ ಬನ್ನಿಸ್ ಟಂಟೋಲ’ ಘಟಕಕ್ಕೆ ಚಾಲನೆ

Suddi Udaya
error: Content is protected !!