23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪತಿ ಸಭಾಭವನ ಪಡಂಗಡಿಯಲ್ಲಿ ಫಾದರ್ ಎಲ್.ಎಂ. ಪಿಂಟೋ ಆಸ್ಪತ್ರೆ ಬದ್ಯಾರ್ ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಶ್ರೀ ಗಣೇಶೋತ್ಸವ ಸಮಿತಿ ಪಡಂಗಡಿ ಗ್ರಾ.ಪಂ. ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡಂಗಡಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅ.19 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸನಾ ಶಿಬಿರ ನಡೆಯಿತು.

ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಉದ್ಘಾಟಿಸಿ ಉದ್ಘಾಟನಾ ಭಾಷಣ ಮಾಡಿ ಶಿಬಿರದ ಯಶಸ್ವಿಗೆ ಶುಭ ಹಾರೈಸಿದರು. ಫಾದರ್ ಎಲ್ ಎಂ ಪಿಂಟೋ ಆಸ್ಪತ್ರೆ ಬದ್ಯಾರ್ ಇದರ ಆಡಳಿತಾಧಿಕಾರಿಯವರು ಶಿಬಿರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಹರೀಶ್ ಪೂಂಜಾ ಇವರು ಶಿಬಿರದ ಬಗ್ಗೆ ಮಾತನಾಡಿ ನಾವೆಲ್ಲ ಕನಿಷ್ಠ ವರ್ಷದಲ್ಲಿ 100 ದಿನವಾದರೂ ಮನೆಯಲ್ಲೇ ಬೆಳೆಸಿದ ತರಕಾರಿಗಳನ್ನು ಉಪಯೋಗಿಸುವ ಸಂಕಲ್ಪ ಮಾಡಬೇಕು ಇದರಿಂದ ನಮ್ಮ ಆರೋಗ್ಯವನ್ನು ಕಾಪಾಡಲು ನಾವು ಶ್ರಮಿಸಬೇಕೆಂದು ಹಿತ ನುಡಿದು ಶಿಬಿರದ ಯಶಸ್ವಿಗೆ ಹಾರೈಸಿದರು. ಸದಸ್ಯ ಸಂತೋಷ ಕುಮಾರ್ ಜೈನ್ ಮಾತನಾಡಿ ಎಲ್ಲಾ ಸಂಪತ್ತಿಂಗಿತಲು ಮಿಗಿಲಾದ ಸಂಪತ್ತು ಅದು ಆರೋಗ್ಯ ಅದನ್ನು ಕಾಪಾಡಿ ನೆಮ್ಮದಿಯ ಜೀವನವನ್ನು ಸಾಗಿಸಬೇಕೆಂಬ ಹಿತನುಡಿಯೊಂದಿಗೆ ಶಿಬಿರದ ಯಶಸ್ವಿಗಾಗಿ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ ಸ್ವಾಗತಿಸಿ, ಎಲ್ ಎಂ ಆಸ್ಪತ್ರೆ ಸಿಬ್ಬಂದಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya
error: Content is protected !!