September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪತಿ ಸಭಾಭವನ ಪಡಂಗಡಿಯಲ್ಲಿ ಫಾದರ್ ಎಲ್.ಎಂ. ಪಿಂಟೋ ಆಸ್ಪತ್ರೆ ಬದ್ಯಾರ್ ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಶ್ರೀ ಗಣೇಶೋತ್ಸವ ಸಮಿತಿ ಪಡಂಗಡಿ ಗ್ರಾ.ಪಂ. ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡಂಗಡಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅ.19 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸನಾ ಶಿಬಿರ ನಡೆಯಿತು.

ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಉದ್ಘಾಟಿಸಿ ಉದ್ಘಾಟನಾ ಭಾಷಣ ಮಾಡಿ ಶಿಬಿರದ ಯಶಸ್ವಿಗೆ ಶುಭ ಹಾರೈಸಿದರು. ಫಾದರ್ ಎಲ್ ಎಂ ಪಿಂಟೋ ಆಸ್ಪತ್ರೆ ಬದ್ಯಾರ್ ಇದರ ಆಡಳಿತಾಧಿಕಾರಿಯವರು ಶಿಬಿರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಹರೀಶ್ ಪೂಂಜಾ ಇವರು ಶಿಬಿರದ ಬಗ್ಗೆ ಮಾತನಾಡಿ ನಾವೆಲ್ಲ ಕನಿಷ್ಠ ವರ್ಷದಲ್ಲಿ 100 ದಿನವಾದರೂ ಮನೆಯಲ್ಲೇ ಬೆಳೆಸಿದ ತರಕಾರಿಗಳನ್ನು ಉಪಯೋಗಿಸುವ ಸಂಕಲ್ಪ ಮಾಡಬೇಕು ಇದರಿಂದ ನಮ್ಮ ಆರೋಗ್ಯವನ್ನು ಕಾಪಾಡಲು ನಾವು ಶ್ರಮಿಸಬೇಕೆಂದು ಹಿತ ನುಡಿದು ಶಿಬಿರದ ಯಶಸ್ವಿಗೆ ಹಾರೈಸಿದರು. ಸದಸ್ಯ ಸಂತೋಷ ಕುಮಾರ್ ಜೈನ್ ಮಾತನಾಡಿ ಎಲ್ಲಾ ಸಂಪತ್ತಿಂಗಿತಲು ಮಿಗಿಲಾದ ಸಂಪತ್ತು ಅದು ಆರೋಗ್ಯ ಅದನ್ನು ಕಾಪಾಡಿ ನೆಮ್ಮದಿಯ ಜೀವನವನ್ನು ಸಾಗಿಸಬೇಕೆಂಬ ಹಿತನುಡಿಯೊಂದಿಗೆ ಶಿಬಿರದ ಯಶಸ್ವಿಗಾಗಿ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ ಸ್ವಾಗತಿಸಿ, ಎಲ್ ಎಂ ಆಸ್ಪತ್ರೆ ಸಿಬ್ಬಂದಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!