September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯನ್ನು ಅ.18 ರಂದು ಆಯೋಜಿಸಲಾಗಿತ್ತು.

ರಕ್ಷಕ – ಶಿಕ್ಷಕ ಸಂಘದ 2024 – 25 ನೇ ಸಾಲಿನ ವರದಿ ಮತ್ತು ಲೆಕ್ಕಪತ್ರವನ್ನು ರಕ್ಷಕ – ಶಿಕ್ಷಕ ಸಂಘದ ಸಂಚಾಲಕ ಪ್ರೊ. ಸಂತೋಷ್ ಪ್ರಭು .ಎಮ್ ಮಂಡಿಸಿದರು. ನಂತರ 2024 – 25 ನೇ ಸಾಲಿನಲ್ಲಿ ಕಾಲೇಜಿನ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಕಾಲೇಜಿನ 2024 – 25 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ಶ್ಯಾಮರಾವ್ ಉಂಡೆಮನೆ ಇವರ ಅಮೂಲ್ಯ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು. ನಂತರ 2025 -26ನೇ ಸಾಲಿನ ನೂತನ ರಕ್ಷಕ ಶಿಕ್ಷಕ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಗಣೇಶ ಆಚಾರ್ಯ ಆಯ್ಕೆಯಾದರು.


ಮುಖ್ಯ ಅತಿಥಿಗಳಾಗಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಇದರ ನಿರ್ದೇಶಕರಾದ ಪ್ರೊ.ಸೀತಾರಾಮ ಕೇವಳ ಮಾತನಾಡಿ “ಮಕ್ಕಳ ಜೀವನವನ್ನು ರೂಪಿಸುವಲ್ಲಿ ಪೋಷಕರ ಪಾತ್ರ”, ಹಾಗೂ “ಸಹಕಾರದಿಂದಲೇ ಸಾಧನೆ” ಎಂದು ಪೋಷಕರ ಮನಮುಟ್ಟುವ ಪ್ರೇರಣಾದಾಯಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷ ಪ್ರೊ.ಮಾಧವ ಅವರು ಕಾಲೇಜಿನ ಅಭಿವೃದ್ಧಿಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಹಕಾರವನ್ನು ಉಲ್ಲೇಖಿಸಿ, ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ರಕ್ಷಕ – ಶಿಕ್ಷಕ ಸಂಘದ ಸಂಚಾಲಕರಾದ ಪ್ರೊ. ಸಂತೋಷ್ ಪ್ರಭು.ಎಮ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ವೈಶಾಲಿ .ಯು ,ಐಕ್ಯೂಎಸಿ ಸಂಚಾಲಕರಾದ ಡಾ. ಅವಿತಾ ಮರಿಯಾ ಕ್ವಾಡ್ರಸ್, ರಕ್ಷಕ – ಶಿಕ್ಷಕ ಸಂಘದ ಸಹ ಸಂಚಾಲಕರಾದ ಪ್ರೊ. ಪ್ರವೀಣ್ ಇವರು ಉಪಸ್ಥಿತರಿದ್ದರು.


ಐಕ್ಯೂಎಸಿ ಸಂಚಾಲಕರಾದ ಡಾ. ಅವಿತಾ ಮರಿಯಾ ಕ್ವಾಡ್ರಸ್ ಸ್ವಾಗತಿಸಿ , ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ವೈಶಾಲಿ. ಯು ವಂದಿಸಿದರು. ಹಾಗೂ ಸಾಂಸ್ಕೃತಿಕ ಸಂಘದ ಸಂಚಾಲಕರಾದ ಪ್ರೊ. ರೇಖಾ ಯು.ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya
error: Content is protected !!