July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಈ ಕಾಲೇಜಿಗೆ ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಾತಿ ಪಡೆದಿರುತ್ತಾರೆ. ಪ್ರಸ್ತುತ ಕಾಲೇಜಿನಲ್ಲಿ ಬಿಎ, ಬಿ.ಕಾಂ, ಬಿಬಿಎ ,ಎಮ್ ಎ ಮತ್ತುಎಮ್ ಕಾಂ ತರಗತಿಗಳು ನಡೆಯುತ್ತಿದೆ.

ಬೆಳ್ತಂಗಡಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 180 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ತಮ್ಮ ಮುಂದಿನ ಪದವಿ ವ್ಯಾಸಂಗಕ್ಕಾಗಿ ಹತ್ತಿರವಿರುವ ಖಾಸಗಿ ಕಾಲೇಜುಗಳಿಗೆ ಹೆಚ್ಚಿನ ಶುಲ್ಕವನ್ನು ಪಾವತಿಸಿ ವ್ಯಾಸಂಗ ಮಾಡಬೇಕಾಗಿರುತ್ತದೆ. ಪ್ರಸ್ತುತ ಬೆಳ್ತಂಗಡಿ ತಾಲೂಕಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗಗಳಿರುವುದಿಲ್ಲ ,ಹೆಚ್ಚಿನ ವಿದ್ಯಾರ್ಥಿಗಳ ಮತ್ತು ಪೋಷಕರ ಬೇಡಿಕೆಯಂತೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಗೆ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಮತ್ತು ಅಗತ್ಯವಿರುವ 6 ಕೊಠಡಿಗಳನ್ನು ಮತ್ತು 2 ಪ್ರಯೋಗಾಲಯಗಳನ್ನು ನಿರ್ಮಿಸಲು ಅನುದಾನವನ್ನು ಒದಗಿಸಿಕೊಡಬೇಕೆಂದರು. ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು.

ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿ ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆಯ ಕವಿತಾ ಕೆ ಆರ್ ರವರಿಗೆ ಕಾಲೇಜಿಗೆ ಭೇಟಿ ನೀಡಿ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದರು.

Related posts

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

Suddi Udaya
error: Content is protected !!