July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

ಶಿಶಿಲ : ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ -ಬೃಹತ್ ಹಗ್ಗಜಗ್ಗಾಟ ಕಾರ್ಯಕ್ರಮ ಶಿಶಿಲದ ಅಡ್ಡಹಳ್ಳ ದಲ್ಲಿ ಅ. 19ರಂದು ನಡೆಯಿತು.

ಮುಂಜಾನೆ ದೋಸೆ ಹಬ್ಬಕ್ಕೆ ಶಿಶಿಲೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ ಚಾಲನೆ ನೀಡಿದರು. ರಾತ್ರಿ ಅಡ್ಡಹಳ್ಳ ಫ್ರೆಂಡ್ಸ್ ತಂಡದ ಅಧ್ಯಕ್ಷರಾದ ಕರುಣಾಕರ ಶಿಶಿಲ ಅಧ್ಯಕ್ಷತೆಯಲ್ಲಿ ನಡೆದ ಸಭಾಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ರವರು ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ, ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀನ್ ಡಿ, ಶಿಶಿಲೇಶ್ವರ ದೇವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷ ಸುನಿಲ್ ಗೋಖಲೆ, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿಶಿಲ ವಲಯದ ಮೇಲ್ವಿಚಾರಕರಾದ ಗಾಯತ್ರಿ ಮತ್ತು ರಶ್ಮಿತಾ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಿದರು. ಅತಿಥಿಗಳನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಚಂದನ ಕುಮಾರಿ ನಡೆಸಿಕೊಟ್ಟು ಶಿವಾನಂದ ಶಿಶಿಲ ಧನ್ಯವಾದವಿತ್ತರು.

ಶಿಶಿಲ ಗ್ರಾಮ ಮುಂದಿನ ದಿನಗಳಲ್ಲಿ ಪ್ರವಾಸಿಗರ ತಾಣವಾಗಲಿದೆ – ಶಾಸಕ ಹರೀಶ್ ಪೂಂಜ

ದೋಸೆ ಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜಾರ ಬಳಿ ಕಾರ್ಯಕ್ರಮದ ಆಯೋಜಕರಾದ ಕರುಣಾಕರ ಶಿಶಿಲ ಮತ್ತು ಸಂದೀಪ್ ಅಮ್ಮುಡಂಗೆ ಮಾತನಾಡಿ ಇನ್ನೆರಡು ತಿಂಗಳಲ್ಲಿ ಶಿಶಿಲ ಸರಕಾರಿ ಶಾಲೆಯ ನೂತನ ಕೊಠಡಿ ಉದ್ಘಾಟನೆ ನಡೆಯಲಿದ್ದು ಉದ್ಘಾಟನೆಗೆ ಕೇಂದ್ರ ಸಚಿವರನ್ನು ಕರೆತರಬೇಕು ಕೇಂದ್ರ ಸಚಿವರೊಬ್ಬರೂ ಶಿಶಿಲಕ್ಕೆ ಆಗಮಿಸಿದರೆ ಇದು ಮೊದಲ ಬಾರಿಗೆ ಕೇಂದ್ರ ಸಚಿವರೊಬ್ಬರೂ ಆಗಮಿಸಿದಂತೆ ಆಗುತ್ತದೆ ಈ ಹಿಂದೆ ಇಂದಿರಾ ಗಾಂಧಿ ಭೇಟಿ ನೀಡಿದ್ದರು, ಅಗ ಅವರು ಯಾವುದೇ ಹುದ್ದೆಯಲ್ಲಿರಲಿಲ್ಲ. ಈ ಬಾರಿ ಕೇಂದ್ರ ಸಚಿವರು ಶಿಶಿಲಕ್ಕೆ ಆಗಮಿಸಿದರೆ ಅವರ ಬಳಿ ಶಿಶಿಲದ ಸಮಗ್ರ ಅಭಿವೃದ್ಧಿ ಮತ್ತು ಶಿಶಿಲವನ್ನು ಪ್ರವಾಸಿ ತಾಣವಾಗಿ ಹೇಗೆ ರೂಪುಗೊಳಿಸಬೇಕು ಎಂಬುದರ ರೂಪುರೇಷೆಯನ್ನು ಸಿದ್ದಪಡಿಸಿ ಕೊಡುತ್ತೇವೆ ಎಂದು ಶಾಸಕರ ಬಳಿ ತಿಳಿಸಿದಾಗ ಶಾಸಕರು ಮಾತನಾಡಿ ನಿಮ್ಮ ಈ ಉತ್ತಮ ಆಲೋಚನೆಗೆ ನನ್ನ ಬೆಂಬಲ ನೂರಕ್ಕೆ ನೂರರಷ್ಟು ನೀಡುತ್ತೇನೆ ಶೋಭಾ ಕರಂದ್ಲಾಜೆ ಅಥವಾ ವಿ ಸೋಮಣ್ಣ ಇವರಿಬ್ಬರಲ್ಲಿ ಒಬ್ಬ ಸಚಿವರನ್ನು ಖಂಡಿತ ಕರೆದುಕೊಂಡು ಬರುತ್ತೇನೆ ಅದಲ್ಲದೆ ಶಿಶಿಲ ಗ್ರಾಮ ಪ್ರವಾಸಿ ತಾಣವಾಗುವ ಕನಸು ನಾನು ಕೂಡ ಕಂಡಿದ್ದೇನೆ ಎಂದು ತಿಳಿಸಿದರು.

Related posts

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!