23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

ಬೆಂಗಳೂರು ವಿಶ್ವವಿದ್ಯಾಲಯದ 2022–24ನೇ ಸಾಲಿನ ಶಿಕ್ಷಣ ಸ್ನಾತಕೋತ್ತರ (Master of Education) ವಿಭಾಗದಲ್ಲಿ ನೈನಾಡಿನ ಚೇತನಾ ಅವರು ನಾಲ್ಕು ಚಿನ್ನದ ಪದಕಗಳನ್ನು ಗೆದ್ದು, ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಈ ಗೌರವವನ್ನು ಅವರು ಬೆಂಗಳೂರು ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 60ನೇ ವಾರ್ಷಿಕ ದೀಕ್ಷಾಂತ ಸಮಾರಂಭದಲ್ಲಿ ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಕುಲಸಚಿವರಾದ ಡಾ. ಎಸ್.ಎಂ. ಜಯಕಾರ, ಪ್ರೋಕುಲಪತಿಗಳಾದ ಡಾ. ಸಿ.ಎಂ. ಸುಧಾಕರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಶ್ರೀಮತಿ ಚೇತನಾ ಕರುಣಾಕರವರು ನೈನಾಡಿನ ಶಿವಪ್ಪ ಮೂಲ್ಯ ಮತ್ತು ಪುಷ್ಪಾವತಿ ದಂಪತಿಗಳ ಸುಪುತ್ರಿಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುತ್ತಾರೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya
error: Content is protected !!