25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

ಬೆಂಗಳೂರು ವಿಶ್ವವಿದ್ಯಾಲಯದ 2022–24ನೇ ಸಾಲಿನ ಶಿಕ್ಷಣ ಸ್ನಾತಕೋತ್ತರ (Master of Education) ವಿಭಾಗದಲ್ಲಿ ನೈನಾಡಿನ ಚೇತನಾ ಅವರು ನಾಲ್ಕು ಚಿನ್ನದ ಪದಕಗಳನ್ನು ಗೆದ್ದು, ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಈ ಗೌರವವನ್ನು ಅವರು ಬೆಂಗಳೂರು ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 60ನೇ ವಾರ್ಷಿಕ ದೀಕ್ಷಾಂತ ಸಮಾರಂಭದಲ್ಲಿ ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಕುಲಸಚಿವರಾದ ಡಾ. ಎಸ್.ಎಂ. ಜಯಕಾರ, ಪ್ರೋಕುಲಪತಿಗಳಾದ ಡಾ. ಸಿ.ಎಂ. ಸುಧಾಕರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಶ್ರೀಮತಿ ಚೇತನಾ ಕರುಣಾಕರವರು ನೈನಾಡಿನ ಶಿವಪ್ಪ ಮೂಲ್ಯ ಮತ್ತು ಪುಷ್ಪಾವತಿ ದಂಪತಿಗಳ ಸುಪುತ್ರಿಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುತ್ತಾರೆ.

Related posts

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!