July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಈ ಕಾಲೇಜಿಗೆ ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಾತಿ ಪಡೆದಿರುತ್ತಾರೆ. ಪ್ರಸ್ತುತ ಕಾಲೇಜಿನಲ್ಲಿ ಬಿಎ, ಬಿ.ಕಾಂ, ಬಿಬಿಎ ,ಎಮ್ ಎ ಮತ್ತುಎಮ್ ಕಾಂ ತರಗತಿಗಳು ನಡೆಯುತ್ತಿದೆ.

ಬೆಳ್ತಂಗಡಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 180 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ತಮ್ಮ ಮುಂದಿನ ಪದವಿ ವ್ಯಾಸಂಗಕ್ಕಾಗಿ ಹತ್ತಿರವಿರುವ ಖಾಸಗಿ ಕಾಲೇಜುಗಳಿಗೆ ಹೆಚ್ಚಿನ ಶುಲ್ಕವನ್ನು ಪಾವತಿಸಿ ವ್ಯಾಸಂಗ ಮಾಡಬೇಕಾಗಿರುತ್ತದೆ. ಪ್ರಸ್ತುತ ಬೆಳ್ತಂಗಡಿ ತಾಲೂಕಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗಗಳಿರುವುದಿಲ್ಲ ,ಹೆಚ್ಚಿನ ವಿದ್ಯಾರ್ಥಿಗಳ ಮತ್ತು ಪೋಷಕರ ಬೇಡಿಕೆಯಂತೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಗೆ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಮತ್ತು ಅಗತ್ಯವಿರುವ 6 ಕೊಠಡಿಗಳನ್ನು ಮತ್ತು 2 ಪ್ರಯೋಗಾಲಯಗಳನ್ನು ನಿರ್ಮಿಸಲು ಅನುದಾನವನ್ನು ಒದಗಿಸಿಕೊಡಬೇಕೆಂದರು. ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು.

ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿ ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆಯ ಕವಿತಾ ಕೆ ಆರ್ ರವರಿಗೆ ಕಾಲೇಜಿಗೆ ಭೇಟಿ ನೀಡಿ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದರು.

Related posts

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya
error: Content is protected !!