25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಈ ಕಾಲೇಜಿಗೆ ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಾತಿ ಪಡೆದಿರುತ್ತಾರೆ. ಪ್ರಸ್ತುತ ಕಾಲೇಜಿನಲ್ಲಿ ಬಿಎ, ಬಿ.ಕಾಂ, ಬಿಬಿಎ ,ಎಮ್ ಎ ಮತ್ತುಎಮ್ ಕಾಂ ತರಗತಿಗಳು ನಡೆಯುತ್ತಿದೆ.

ಬೆಳ್ತಂಗಡಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 180 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ತಮ್ಮ ಮುಂದಿನ ಪದವಿ ವ್ಯಾಸಂಗಕ್ಕಾಗಿ ಹತ್ತಿರವಿರುವ ಖಾಸಗಿ ಕಾಲೇಜುಗಳಿಗೆ ಹೆಚ್ಚಿನ ಶುಲ್ಕವನ್ನು ಪಾವತಿಸಿ ವ್ಯಾಸಂಗ ಮಾಡಬೇಕಾಗಿರುತ್ತದೆ. ಪ್ರಸ್ತುತ ಬೆಳ್ತಂಗಡಿ ತಾಲೂಕಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗಗಳಿರುವುದಿಲ್ಲ ,ಹೆಚ್ಚಿನ ವಿದ್ಯಾರ್ಥಿಗಳ ಮತ್ತು ಪೋಷಕರ ಬೇಡಿಕೆಯಂತೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಗೆ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಮತ್ತು ಅಗತ್ಯವಿರುವ 6 ಕೊಠಡಿಗಳನ್ನು ಮತ್ತು 2 ಪ್ರಯೋಗಾಲಯಗಳನ್ನು ನಿರ್ಮಿಸಲು ಅನುದಾನವನ್ನು ಒದಗಿಸಿಕೊಡಬೇಕೆಂದರು. ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು.

ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿ ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆಯ ಕವಿತಾ ಕೆ ಆರ್ ರವರಿಗೆ ಕಾಲೇಜಿಗೆ ಭೇಟಿ ನೀಡಿ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದರು.

Related posts

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya
error: Content is protected !!