26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

ಮುಂಡಾಜೆ: ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಆಶ್ರಯದಲ್ಲಿ ಬಂಟೆರೆ ಕಲಾ ಪರ್ಬ ಕಾರ್ಯಕ್ರಮವು ಅ.20ರಂದು ನಡೆಯಿತು. ತ್ರಿಷಾ ರೈ, ದಿವ್ಯಶ್ರೀ‌ ಶೆಟ್ಟಿ, ಅಧಿತಿ ಶೆಟ್ಟಿ ಇವರು ನೃತ್ಯ ಕಾರ್ಯಕ್ರಮ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ಮಿಮಿಕ್ರಿ ಮತ್ತು ಪಾಡ್ದನ ಕಾರ್ಯಕ್ರಮಗಳನ್ನು ನೀಡಿದರು. ಕಟೀಲು ಮೇಳದ ಯಕ್ಷಗಾನ ಕಲಾವಿದ ಮುಂಡಾಜೆ ನವೀನ್ ಶೆಟ್ಟಿ ಇವರ ನಿರ್ದೇಶನ ಹಾಗೂ ಅಗರಿ ಪುರುಷೋತ್ತಮ ಶೆಟ್ಟಿ ಇವರ ಸಂಯೋಜನೆಯಲ್ಲಿ ತುಳುನಾಡ ಬಲಿಯೇಂದ್ರ ಎನ್ನುವ ತುಳು ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಅಗರಿ ಪುರುಷೋತ್ತಮ ಶೆಟ್ಟಿ ಮತ್ತು ನಾರಾಯಣ ಶೆಟ್ಟಿ ಮಂಜುಶ್ರಿನಗರ, ಮದ್ದಳೆ ಪುರಂದರ ಧರ್ಮಸ್ಥಳ, ಚೆಂಡೆ ಹರೀಶ್ ಚಾರ್ಮಾಡಿ, ಚಕ್ರತಾಳ ಪವನ್ ಚಾರ್ಮಾಡಿ ಹಾಗೂ ಮುಮ್ಮೆಳದಲ್ಲಿ ನವೀನ್ ಶೆಟ್ಟಿ ಮುಂಡಾಜೆ, ಚಿತ್ರಿತಾ ನವೀನ್ ಶೆಟ್ಟಿ,, ನವೀತ್ ಶೆಟ್ಟಿ ನೆಯ್ಯಾಲು, ರಂಜೀತ್ ಶೆಟ್ಟಿ ನೆಯ್ಯಾಲು, ಹರ್ಷೀತ್ ಶೆಟ್ಟಿ ನೆಯ್ಯಾಲು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಅಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ ಸಂಘಟಿಸಿದರು.

ಸಭಾ ಕಾರ್ಯಕ್ರಮದಲ್ಲಿ ಅಗರಿ ರಾಮಣ್ಣ ಶೆಟ್ಟಿ, ಉಜಿರೆ ವಲಯ ಸಮಿತಿಯ ಅಧ್ಯಕ್ಷೆ ವನಿತಾ ಶೆಟ್ಟಿ, ಕಾರ್ಯದರ್ಶಿ ಸುದೇಶ್ ಶೆಟ್ಟಿ, ಪದಾಧಿಕಾರಿಗಳಾದ ವೆಂಕಟರಮಣ ಶೆಟ್ಟಿ ಕಲ್ಮಂಜ, ಜಯರಾಮ ಶೆಟ್ಟಿ ಕೆಂಬರ್ಜೆ, ರಾಧಾಕೃಷ್ಣ ಶೆಟ್ಟಿ ಕುಂಟಿನಿ, ವಿಶ್ವನಾಥ ಶೆಟ್ಟಿ, ಮುಂಡ್ರುಪಾಡಿ, ಚಂದ್ರಲತಾ ಶೆಟ್ಟಿ ಅಗರಿ ಉಪಸ್ಥಿತರಿದ್ದರು. ಭವ್ಯ ರೈ ಅಗರಿ ಇವರು ಸ್ವಾಗತಿಸಿ, ಮಧು ಶೆಟ್ಟಿ ಹುರ್ತಾಜೆ ಇವರ ಧನ್ಯವಾದ ಸಮರ್ಪಿಸಿದರು. ತ್ರಿಶಾ ರೈ ಕಲ್ಲ ಹಿತ್ತಿಲು ಇವರು ನಿರೂಪಿಸಿದರು. ಗ್ರಾಮ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಎಲ್ಲಾ ಬಂಟ ಬಂಧುಗಳು ಸಹಕಾರ ನೀಡಿದರು.

Related posts

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya
error: Content is protected !!