September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ ಭಗವಾನ್ ೧೦೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಜರಗಿತು.


ಭಗವಾನ್ ತೀರ್ಥಂಕರರಿಗೆ ಹಾಲು, ಗಂಧ, ಸಿಯಾಳ, ಚಂದನ ಮುಂತಾದ ದ್ರವ್ಯಗಳಿಂದ ಅಭಿಷೇಕಗಳನ್ನು ಮಾಡಿ ಮಹಾಮತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆಗಳನ್ನು ನೆರವೇರಿಸಿ ಸಾಮೂಹಿಕ ಆರತಿ ಬೆಳಗುವುದರೊಂದಿಗೆ ಜಿನ ಭಜನೆಯೊಂದಿಗೆ ಪೂಜಾ ಮಹೋತ್ಸವ ನಡೆಯಿತು.


ಈ ಸಂದರ್ಭದಲ್ಲಿ ವಿದ್ಯುತ್ ಚಾಲಿತ ಬ್ಯಾಂಡ್ ಸೆಟ್‌ನ್ನು ಶ್ರೀಮತಿ ಶ್ರೇಯ ವಿಶಾಲ್ ಹೆಗಡೆ ಕಾಯರ್ತಡ್ಕ ಇವರು ದಾನ ನೀಡಿದರು. ಎಲ್ಲರ ಸಹಕಾರದಿಂದ ದೋಸೆ ಹಬ್ಬವನ್ನು ಆಚರಿಸಲಾಯಿತು. ಅತಿ ಹೆಚ್ಚು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದು ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯಕುಮಾರ್, ಫಣಿರಾಜ್ ಜೈನ್, ಯುವರಾಜ್ ಜೈನ್, ಸಂತೋಷ್ ಜೈನ್, ಅತಿಶಯ ಜೈನ್, ವಿಜೇಶ್ ಜೈನ್, ಭುವನ್ ಜೈನ್, ಪ್ರೀತಮ್ ಜೈನ್ ಹಾಗೂ ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya
error: Content is protected !!