July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ ಭಗವಾನ್ ೧೦೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಜರಗಿತು.


ಭಗವಾನ್ ತೀರ್ಥಂಕರರಿಗೆ ಹಾಲು, ಗಂಧ, ಸಿಯಾಳ, ಚಂದನ ಮುಂತಾದ ದ್ರವ್ಯಗಳಿಂದ ಅಭಿಷೇಕಗಳನ್ನು ಮಾಡಿ ಮಹಾಮತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆಗಳನ್ನು ನೆರವೇರಿಸಿ ಸಾಮೂಹಿಕ ಆರತಿ ಬೆಳಗುವುದರೊಂದಿಗೆ ಜಿನ ಭಜನೆಯೊಂದಿಗೆ ಪೂಜಾ ಮಹೋತ್ಸವ ನಡೆಯಿತು.


ಈ ಸಂದರ್ಭದಲ್ಲಿ ವಿದ್ಯುತ್ ಚಾಲಿತ ಬ್ಯಾಂಡ್ ಸೆಟ್‌ನ್ನು ಶ್ರೀಮತಿ ಶ್ರೇಯ ವಿಶಾಲ್ ಹೆಗಡೆ ಕಾಯರ್ತಡ್ಕ ಇವರು ದಾನ ನೀಡಿದರು. ಎಲ್ಲರ ಸಹಕಾರದಿಂದ ದೋಸೆ ಹಬ್ಬವನ್ನು ಆಚರಿಸಲಾಯಿತು. ಅತಿ ಹೆಚ್ಚು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದು ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯಕುಮಾರ್, ಫಣಿರಾಜ್ ಜೈನ್, ಯುವರಾಜ್ ಜೈನ್, ಸಂತೋಷ್ ಜೈನ್, ಅತಿಶಯ ಜೈನ್, ವಿಜೇಶ್ ಜೈನ್, ಭುವನ್ ಜೈನ್, ಪ್ರೀತಮ್ ಜೈನ್ ಹಾಗೂ ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya
error: Content is protected !!