23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ ಭಗವಾನ್ ೧೦೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಜರಗಿತು.


ಭಗವಾನ್ ತೀರ್ಥಂಕರರಿಗೆ ಹಾಲು, ಗಂಧ, ಸಿಯಾಳ, ಚಂದನ ಮುಂತಾದ ದ್ರವ್ಯಗಳಿಂದ ಅಭಿಷೇಕಗಳನ್ನು ಮಾಡಿ ಮಹಾಮತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆಗಳನ್ನು ನೆರವೇರಿಸಿ ಸಾಮೂಹಿಕ ಆರತಿ ಬೆಳಗುವುದರೊಂದಿಗೆ ಜಿನ ಭಜನೆಯೊಂದಿಗೆ ಪೂಜಾ ಮಹೋತ್ಸವ ನಡೆಯಿತು.


ಈ ಸಂದರ್ಭದಲ್ಲಿ ವಿದ್ಯುತ್ ಚಾಲಿತ ಬ್ಯಾಂಡ್ ಸೆಟ್‌ನ್ನು ಶ್ರೀಮತಿ ಶ್ರೇಯ ವಿಶಾಲ್ ಹೆಗಡೆ ಕಾಯರ್ತಡ್ಕ ಇವರು ದಾನ ನೀಡಿದರು. ಎಲ್ಲರ ಸಹಕಾರದಿಂದ ದೋಸೆ ಹಬ್ಬವನ್ನು ಆಚರಿಸಲಾಯಿತು. ಅತಿ ಹೆಚ್ಚು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದು ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯಕುಮಾರ್, ಫಣಿರಾಜ್ ಜೈನ್, ಯುವರಾಜ್ ಜೈನ್, ಸಂತೋಷ್ ಜೈನ್, ಅತಿಶಯ ಜೈನ್, ವಿಜೇಶ್ ಜೈನ್, ಭುವನ್ ಜೈನ್, ಪ್ರೀತಮ್ ಜೈನ್ ಹಾಗೂ ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya
error: Content is protected !!