ಗ್ರಾಮಾಂತರ ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

ಮುಂಡಾಜೆ: ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಆಶ್ರಯದಲ್ಲಿ ಬಂಟೆರೆ ಕಲಾ ಪರ್ಬ ಕಾರ್ಯಕ್ರಮವು ಅ.20ರಂದು ನಡೆಯಿತು. ತ್ರಿಷಾ ರೈ, ದಿವ್ಯಶ್ರೀ‌ ಶೆಟ್ಟಿ, ಅಧಿತಿ ಶೆಟ್ಟಿ ಇವರು ನೃತ್ಯ ಕಾರ್ಯಕ್ರಮ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ಮಿಮಿಕ್ರಿ ಮತ್ತು ಪಾಡ್ದನ ಕಾರ್ಯಕ್ರಮಗಳನ್ನು ನೀಡಿದರು. ಕಟೀಲು ಮೇಳದ ಯಕ್ಷಗಾನ ಕಲಾವಿದ ಮುಂಡಾಜೆ ನವೀನ್ ಶೆಟ್ಟಿ ಇವರ ನಿರ್ದೇಶನ ಹಾಗೂ ಅಗರಿ ಪುರುಷೋತ್ತಮ ಶೆಟ್ಟಿ ಇವರ ಸಂಯೋಜನೆಯಲ್ಲಿ ತುಳುನಾಡ ಬಲಿಯೇಂದ್ರ ಎನ್ನುವ ತುಳು ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಅಗರಿ ಪುರುಷೋತ್ತಮ ಶೆಟ್ಟಿ ಮತ್ತು ನಾರಾಯಣ ಶೆಟ್ಟಿ ಮಂಜುಶ್ರಿನಗರ, ಮದ್ದಳೆ ಪುರಂದರ ಧರ್ಮಸ್ಥಳ, ಚೆಂಡೆ ಹರೀಶ್ ಚಾರ್ಮಾಡಿ, ಚಕ್ರತಾಳ ಪವನ್ ಚಾರ್ಮಾಡಿ ಹಾಗೂ ಮುಮ್ಮೆಳದಲ್ಲಿ ನವೀನ್ ಶೆಟ್ಟಿ ಮುಂಡಾಜೆ, ಚಿತ್ರಿತಾ ನವೀನ್ ಶೆಟ್ಟಿ,, ನವೀತ್ ಶೆಟ್ಟಿ ನೆಯ್ಯಾಲು, ರಂಜೀತ್ ಶೆಟ್ಟಿ ನೆಯ್ಯಾಲು, ಹರ್ಷೀತ್ ಶೆಟ್ಟಿ ನೆಯ್ಯಾಲು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಅಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ ಸಂಘಟಿಸಿದರು.

ಸಭಾ ಕಾರ್ಯಕ್ರಮದಲ್ಲಿ ಅಗರಿ ರಾಮಣ್ಣ ಶೆಟ್ಟಿ, ಉಜಿರೆ ವಲಯ ಸಮಿತಿಯ ಅಧ್ಯಕ್ಷೆ ವನಿತಾ ಶೆಟ್ಟಿ, ಕಾರ್ಯದರ್ಶಿ ಸುದೇಶ್ ಶೆಟ್ಟಿ, ಪದಾಧಿಕಾರಿಗಳಾದ ವೆಂಕಟರಮಣ ಶೆಟ್ಟಿ ಕಲ್ಮಂಜ, ಜಯರಾಮ ಶೆಟ್ಟಿ ಕೆಂಬರ್ಜೆ, ರಾಧಾಕೃಷ್ಣ ಶೆಟ್ಟಿ ಕುಂಟಿನಿ, ವಿಶ್ವನಾಥ ಶೆಟ್ಟಿ, ಮುಂಡ್ರುಪಾಡಿ, ಚಂದ್ರಲತಾ ಶೆಟ್ಟಿ ಅಗರಿ ಉಪಸ್ಥಿತರಿದ್ದರು. ಭವ್ಯ ರೈ ಅಗರಿ ಇವರು ಸ್ವಾಗತಿಸಿ, ಮಧು ಶೆಟ್ಟಿ ಹುರ್ತಾಜೆ ಇವರ ಧನ್ಯವಾದ ಸಮರ್ಪಿಸಿದರು. ತ್ರಿಶಾ ರೈ ಕಲ್ಲ ಹಿತ್ತಿಲು ಇವರು ನಿರೂಪಿಸಿದರು. ಗ್ರಾಮ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಎಲ್ಲಾ ಬಂಟ ಬಂಧುಗಳು ಸಹಕಾರ ನೀಡಿದರು.

Related posts

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
error: Content is protected !!