25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ ಭಗವಾನ್ ೧೦೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಜರಗಿತು.


ಭಗವಾನ್ ತೀರ್ಥಂಕರರಿಗೆ ಹಾಲು, ಗಂಧ, ಸಿಯಾಳ, ಚಂದನ ಮುಂತಾದ ದ್ರವ್ಯಗಳಿಂದ ಅಭಿಷೇಕಗಳನ್ನು ಮಾಡಿ ಮಹಾಮತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆಗಳನ್ನು ನೆರವೇರಿಸಿ ಸಾಮೂಹಿಕ ಆರತಿ ಬೆಳಗುವುದರೊಂದಿಗೆ ಜಿನ ಭಜನೆಯೊಂದಿಗೆ ಪೂಜಾ ಮಹೋತ್ಸವ ನಡೆಯಿತು.


ಈ ಸಂದರ್ಭದಲ್ಲಿ ವಿದ್ಯುತ್ ಚಾಲಿತ ಬ್ಯಾಂಡ್ ಸೆಟ್‌ನ್ನು ಶ್ರೀಮತಿ ಶ್ರೇಯ ವಿಶಾಲ್ ಹೆಗಡೆ ಕಾಯರ್ತಡ್ಕ ಇವರು ದಾನ ನೀಡಿದರು. ಎಲ್ಲರ ಸಹಕಾರದಿಂದ ದೋಸೆ ಹಬ್ಬವನ್ನು ಆಚರಿಸಲಾಯಿತು. ಅತಿ ಹೆಚ್ಚು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದು ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯಕುಮಾರ್, ಫಣಿರಾಜ್ ಜೈನ್, ಯುವರಾಜ್ ಜೈನ್, ಸಂತೋಷ್ ಜೈನ್, ಅತಿಶಯ ಜೈನ್, ವಿಜೇಶ್ ಜೈನ್, ಭುವನ್ ಜೈನ್, ಪ್ರೀತಮ್ ಜೈನ್ ಹಾಗೂ ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya
error: Content is protected !!