25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಮಾದರಿ ಗ್ರಾಮ ಪಂಚಾಯತಿಯಾದ ಉಜಿರೆ ಗ್ರಾಮ ಪಂಚಾಯತಿಯಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯ ಅನುಷ್ಠಾನದ ಕುರಿತಂತೆ ಅಧ್ಯಯನ ಪ್ರವಾಸವನ್ನು ನಡೆಸಲು ಆಂಧ್ರ ಪ್ರದೇಶ ರಾಜ್ಯ ಸರ್ಕಾರದ ಸ್ವಚ್ಛ ಆಂಧ್ರ ಕಾರ್ಪೊರೇಷನ್ ಸಮಿತಿಯ ಅಧ್ಯಕ್ಷರಾದ ಕೋಮರೆಡ್ಡಿ ಪಟ್ಟಾಭಿರಾಮ ಹಾಗೂ ಸಮಿತಿಯ ಸದಸ್ಯರು ಭೇಟಿ ನೀಡಿದರು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಕಾರಂತ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಅಧ್ಯಯನ ಪ್ರವಾಸದ ತಂಡವುಉಜಿರೆ ಗ್ರಾ.ಪಂ. ಕಚೇರಿ, ಡಿಜಿಟಲ್ ಅರಿವು ಕೇಂದ್ರ, ಎಂ.ಆರ್.ಎಫ್ ಘಟಕ, ಸ್ವಚ್ಛ ಸಂಕೀರ್ಣ ಘಟಕ, ಮಲ ತ್ಯಾಜ್ಯ ನಿರ್ವಹಣಾ ಘಟಕವನ್ನು ಭೇಟಿ ನೀಡಿ ಅಧ್ಯಯನ ನಡೆಸಿದರು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾನ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸ್ವಚ್ಛ ಭಾರತ ಮಿಷನ್ (ಗ್ರಾ) ಜಿಲ್ಲಾ ಘಟಕದ ಸಂಯೋಜಕರಾದ ಪವನ್, ನವೀನ್ ಹಾಗೂ ಡೊಂಬಯ್ಯ ಅವರು, ಉಜಿರೆ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya
error: Content is protected !!