23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ


ಬೆಳ್ತಂಗಡಿ :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ)ಕರ್ನಾಟಕ, ಕೇಂದ್ರ ಕಚೇರಿ ತುಮಕೂರು,ನೇತ್ರಾವತಿ ವಲಯ ,ಮಂಗಳೂರು,ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಯೋಗ ಬಂಧುಗಳು ಕಾಯರ್ತಡ್ಕದ ಶ್ರೀ ನಂದಗೋಕುಲ ಗೋಶಾಲೆ* ಯಲ್ಲಿ ಸಾಮೂಹಿಕ ಗೋಪೂಜೆ ಯನ್ನು ಆಚರಿಸಿದರು.


ಸುಮಾರು 90 ಕ್ಕೂ ವಿಕ್ಕಿ ಯೋಗ ಬಂಧುಗಳು ಗೋಶಾಲೆಯನ್ನು ಹಾಗೂ ಗೋವುಗಳನ್ನು ಸ್ವಚ್ಛಗೊಳಿಸಿ ಗೋಮಾತೆಗೆ ಅಲಂಕಾರ ಮಾಡಿ ಆರತಿಯನ್ನು ಬೆಳಗಿ ಗೋಗ್ರಾಸವನ್ನು ನೀಡುವ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಯೋಗ ಬಂಧುಗಳಾದ ವಸಂತ ಕೆಂಬರ್ಜೆ ದಂಪತಿಗಳು ಗೋಪೂಜೆಯ ಮುಂದಾಳತ್ವ ವನ್ನು ವಹಿಸಿದರು.
ಜಿಲ್ಲಾ ಸಮಿತಿಯ ಮಾರ್ಗದರ್ಶನದೊಂದಿಗೆ ಯೋಗ ತರಗತಿಯ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಇವರ ನೇತೃತ್ವದಲ್ಲಿ ಸಹ ಶಿಕ್ಷಕರುಗಳಾದ ಸಂತೋಷ ಕಾಪಿನಡ್ಕ ,ಸುಕೇಶ್ ಗೇರುಕಟ್ಟೆ, ಶಶಿಕಲಾ ವಿಶ್ವನಾಥ್, ಕೋಮಲ ಪ್ರಕಾಶ್, ಗಣೇಶ್ ಪ್ರಸಾದ್, ರಕ್ಷಿತಾ ಪ್ರಸಾದ್ ಇವರ ಸಹಕಾರದೊಂದಿಗೆ ಈ ಕಾರ್ಯಕ್ರಮವು ಸಂಪನ್ನಗೊಂಡಿತು. ಗೋಶಾಲೆಯ ಸಿಬ್ಬಂದಿಗಳು ಸಂಪೂರ್ಣ ಸಹಕಾರವನ್ನು ನೀಡಿದರು. ಯೋಗ ಬಂಧುಗಳಾದ ಅಶ್ವಥ್ ಇವರು ಗೋ ಪೂಜೆಯ ಮಹತ್ವ ಹಾಗೂ ಅವಶ್ಯಕತೆಯ ಬಗ್ಗೆ ಬೌದ್ಧಿಕವನ್ನು ನೀಡಿದರು. ಹಾಗೂ ಶ್ರೀಮತಿ ರವಿಕಲ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ

Suddi Udaya

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya
error: Content is protected !!