September 6, 2026
Uncategorized

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ


ಬೆಳ್ತಂಗಡಿ :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ)ಕರ್ನಾಟಕ, ಕೇಂದ್ರ ಕಚೇರಿ ತುಮಕೂರು,ನೇತ್ರಾವತಿ ವಲಯ ,ಮಂಗಳೂರು,ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಯೋಗ ಬಂಧುಗಳು ಕಾಯರ್ತಡ್ಕದ ಶ್ರೀ ನಂದಗೋಕುಲ ಗೋಶಾಲೆ* ಯಲ್ಲಿ ಸಾಮೂಹಿಕ ಗೋಪೂಜೆ ಯನ್ನು ಆಚರಿಸಿದರು.


ಸುಮಾರು 90 ಕ್ಕೂ ವಿಕ್ಕಿ ಯೋಗ ಬಂಧುಗಳು ಗೋಶಾಲೆಯನ್ನು ಹಾಗೂ ಗೋವುಗಳನ್ನು ಸ್ವಚ್ಛಗೊಳಿಸಿ ಗೋಮಾತೆಗೆ ಅಲಂಕಾರ ಮಾಡಿ ಆರತಿಯನ್ನು ಬೆಳಗಿ ಗೋಗ್ರಾಸವನ್ನು ನೀಡುವ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಯೋಗ ಬಂಧುಗಳಾದ ವಸಂತ ಕೆಂಬರ್ಜೆ ದಂಪತಿಗಳು ಗೋಪೂಜೆಯ ಮುಂದಾಳತ್ವ ವನ್ನು ವಹಿಸಿದರು.
ಜಿಲ್ಲಾ ಸಮಿತಿಯ ಮಾರ್ಗದರ್ಶನದೊಂದಿಗೆ ಯೋಗ ತರಗತಿಯ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಇವರ ನೇತೃತ್ವದಲ್ಲಿ ಸಹ ಶಿಕ್ಷಕರುಗಳಾದ ಸಂತೋಷ ಕಾಪಿನಡ್ಕ ,ಸುಕೇಶ್ ಗೇರುಕಟ್ಟೆ, ಶಶಿಕಲಾ ವಿಶ್ವನಾಥ್, ಕೋಮಲ ಪ್ರಕಾಶ್, ಗಣೇಶ್ ಪ್ರಸಾದ್, ರಕ್ಷಿತಾ ಪ್ರಸಾದ್ ಇವರ ಸಹಕಾರದೊಂದಿಗೆ ಈ ಕಾರ್ಯಕ್ರಮವು ಸಂಪನ್ನಗೊಂಡಿತು. ಗೋಶಾಲೆಯ ಸಿಬ್ಬಂದಿಗಳು ಸಂಪೂರ್ಣ ಸಹಕಾರವನ್ನು ನೀಡಿದರು. ಯೋಗ ಬಂಧುಗಳಾದ ಅಶ್ವಥ್ ಇವರು ಗೋ ಪೂಜೆಯ ಮಹತ್ವ ಹಾಗೂ ಅವಶ್ಯಕತೆಯ ಬಗ್ಗೆ ಬೌದ್ಧಿಕವನ್ನು ನೀಡಿದರು. ಹಾಗೂ ಶ್ರೀಮತಿ ರವಿಕಲ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya
error: Content is protected !!