37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ 2:30ಕ್ಕೆ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ KA-70-0694 ನಂಬರಿನ ಆಟೋ ರಿಕ್ಷಾವನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ(27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ.

ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು. ಆಟೋದ ಮೌಲ್ಯ ರೂಪಾಯಿ 2,50,000 ಮತ್ತು ಗೋಮಾಂಸದ ಮೌಲ್ಯ 21,250 ರೂಪಾಯಿ ಅಗಿದ್ದು ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 12 ಕರ್ನಾಟಕ ಗೋವಧೆ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ ನೇತೃತ್ವದ ಸಬ್ ಇನ್ಸ್‌ಪೆಕ್ಟರ್ ಆನಂದ.ಎಮ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ಭಾಗವಹಿಸಿದರು

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya
error: Content is protected !!