25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ 2:30ಕ್ಕೆ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ KA-70-0694 ನಂಬರಿನ ಆಟೋ ರಿಕ್ಷಾವನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ(27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ.

ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು. ಆಟೋದ ಮೌಲ್ಯ ರೂಪಾಯಿ 2,50,000 ಮತ್ತು ಗೋಮಾಂಸದ ಮೌಲ್ಯ 21,250 ರೂಪಾಯಿ ಅಗಿದ್ದು ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 12 ಕರ್ನಾಟಕ ಗೋವಧೆ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ ನೇತೃತ್ವದ ಸಬ್ ಇನ್ಸ್‌ಪೆಕ್ಟರ್ ಆನಂದ.ಎಮ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ಭಾಗವಹಿಸಿದರು

Related posts

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya
error: Content is protected !!