ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ 2:30ಕ್ಕೆ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ KA-70-0694 ನಂಬರಿನ ಆಟೋ ರಿಕ್ಷಾವನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ(27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ.

ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು. ಆಟೋದ ಮೌಲ್ಯ ರೂಪಾಯಿ 2,50,000 ಮತ್ತು ಗೋಮಾಂಸದ ಮೌಲ್ಯ 21,250 ರೂಪಾಯಿ ಅಗಿದ್ದು ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 12 ಕರ್ನಾಟಕ ಗೋವಧೆ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ ನೇತೃತ್ವದ ಸಬ್ ಇನ್ಸ್‌ಪೆಕ್ಟರ್ ಆನಂದ.ಎಮ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ಭಾಗವಹಿಸಿದರು

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!