23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ


ಬೆಳ್ತಂಗಡಿ :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ)ಕರ್ನಾಟಕ, ಕೇಂದ್ರ ಕಚೇರಿ ತುಮಕೂರು,ನೇತ್ರಾವತಿ ವಲಯ ,ಮಂಗಳೂರು,ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಯೋಗ ಬಂಧುಗಳು ಕಾಯರ್ತಡ್ಕದ ಶ್ರೀ ನಂದಗೋಕುಲ ಗೋಶಾಲೆ* ಯಲ್ಲಿ ಸಾಮೂಹಿಕ ಗೋಪೂಜೆ ಯನ್ನು ಆಚರಿಸಿದರು.


ಸುಮಾರು 90 ಕ್ಕೂ ವಿಕ್ಕಿ ಯೋಗ ಬಂಧುಗಳು ಗೋಶಾಲೆಯನ್ನು ಹಾಗೂ ಗೋವುಗಳನ್ನು ಸ್ವಚ್ಛಗೊಳಿಸಿ ಗೋಮಾತೆಗೆ ಅಲಂಕಾರ ಮಾಡಿ ಆರತಿಯನ್ನು ಬೆಳಗಿ ಗೋಗ್ರಾಸವನ್ನು ನೀಡುವ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಯೋಗ ಬಂಧುಗಳಾದ ವಸಂತ ಕೆಂಬರ್ಜೆ ದಂಪತಿಗಳು ಗೋಪೂಜೆಯ ಮುಂದಾಳತ್ವ ವನ್ನು ವಹಿಸಿದರು.
ಜಿಲ್ಲಾ ಸಮಿತಿಯ ಮಾರ್ಗದರ್ಶನದೊಂದಿಗೆ ಯೋಗ ತರಗತಿಯ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಇವರ ನೇತೃತ್ವದಲ್ಲಿ ಸಹ ಶಿಕ್ಷಕರುಗಳಾದ ಸಂತೋಷ ಕಾಪಿನಡ್ಕ ,ಸುಕೇಶ್ ಗೇರುಕಟ್ಟೆ, ಶಶಿಕಲಾ ವಿಶ್ವನಾಥ್, ಕೋಮಲ ಪ್ರಕಾಶ್, ಗಣೇಶ್ ಪ್ರಸಾದ್, ರಕ್ಷಿತಾ ಪ್ರಸಾದ್ ಇವರ ಸಹಕಾರದೊಂದಿಗೆ ಈ ಕಾರ್ಯಕ್ರಮವು ಸಂಪನ್ನಗೊಂಡಿತು. ಗೋಶಾಲೆಯ ಸಿಬ್ಬಂದಿಗಳು ಸಂಪೂರ್ಣ ಸಹಕಾರವನ್ನು ನೀಡಿದರು. ಯೋಗ ಬಂಧುಗಳಾದ ಅಶ್ವಥ್ ಇವರು ಗೋ ಪೂಜೆಯ ಮಹತ್ವ ಹಾಗೂ ಅವಶ್ಯಕತೆಯ ಬಗ್ಗೆ ಬೌದ್ಧಿಕವನ್ನು ನೀಡಿದರು. ಹಾಗೂ ಶ್ರೀಮತಿ ರವಿಕಲ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya

ಮೇ 23 ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!