September 6, 2026
Uncategorized

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ


ಬೆಳ್ತಂಗಡಿ :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ)ಕರ್ನಾಟಕ, ಕೇಂದ್ರ ಕಚೇರಿ ತುಮಕೂರು,ನೇತ್ರಾವತಿ ವಲಯ ,ಮಂಗಳೂರು,ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಯೋಗ ಬಂಧುಗಳು ಕಾಯರ್ತಡ್ಕದ ಶ್ರೀ ನಂದಗೋಕುಲ ಗೋಶಾಲೆ* ಯಲ್ಲಿ ಸಾಮೂಹಿಕ ಗೋಪೂಜೆ ಯನ್ನು ಆಚರಿಸಿದರು.


ಸುಮಾರು 90 ಕ್ಕೂ ವಿಕ್ಕಿ ಯೋಗ ಬಂಧುಗಳು ಗೋಶಾಲೆಯನ್ನು ಹಾಗೂ ಗೋವುಗಳನ್ನು ಸ್ವಚ್ಛಗೊಳಿಸಿ ಗೋಮಾತೆಗೆ ಅಲಂಕಾರ ಮಾಡಿ ಆರತಿಯನ್ನು ಬೆಳಗಿ ಗೋಗ್ರಾಸವನ್ನು ನೀಡುವ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಯೋಗ ಬಂಧುಗಳಾದ ವಸಂತ ಕೆಂಬರ್ಜೆ ದಂಪತಿಗಳು ಗೋಪೂಜೆಯ ಮುಂದಾಳತ್ವ ವನ್ನು ವಹಿಸಿದರು.
ಜಿಲ್ಲಾ ಸಮಿತಿಯ ಮಾರ್ಗದರ್ಶನದೊಂದಿಗೆ ಯೋಗ ತರಗತಿಯ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಇವರ ನೇತೃತ್ವದಲ್ಲಿ ಸಹ ಶಿಕ್ಷಕರುಗಳಾದ ಸಂತೋಷ ಕಾಪಿನಡ್ಕ ,ಸುಕೇಶ್ ಗೇರುಕಟ್ಟೆ, ಶಶಿಕಲಾ ವಿಶ್ವನಾಥ್, ಕೋಮಲ ಪ್ರಕಾಶ್, ಗಣೇಶ್ ಪ್ರಸಾದ್, ರಕ್ಷಿತಾ ಪ್ರಸಾದ್ ಇವರ ಸಹಕಾರದೊಂದಿಗೆ ಈ ಕಾರ್ಯಕ್ರಮವು ಸಂಪನ್ನಗೊಂಡಿತು. ಗೋಶಾಲೆಯ ಸಿಬ್ಬಂದಿಗಳು ಸಂಪೂರ್ಣ ಸಹಕಾರವನ್ನು ನೀಡಿದರು. ಯೋಗ ಬಂಧುಗಳಾದ ಅಶ್ವಥ್ ಇವರು ಗೋ ಪೂಜೆಯ ಮಹತ್ವ ಹಾಗೂ ಅವಶ್ಯಕತೆಯ ಬಗ್ಗೆ ಬೌದ್ಧಿಕವನ್ನು ನೀಡಿದರು. ಹಾಗೂ ಶ್ರೀಮತಿ ರವಿಕಲ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya
error: Content is protected !!