25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ


ಬೆಳ್ತಂಗಡಿ :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ)ಕರ್ನಾಟಕ, ಕೇಂದ್ರ ಕಚೇರಿ ತುಮಕೂರು,ನೇತ್ರಾವತಿ ವಲಯ ,ಮಂಗಳೂರು,ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಯೋಗ ಬಂಧುಗಳು ಕಾಯರ್ತಡ್ಕದ ಶ್ರೀ ನಂದಗೋಕುಲ ಗೋಶಾಲೆ* ಯಲ್ಲಿ ಸಾಮೂಹಿಕ ಗೋಪೂಜೆ ಯನ್ನು ಆಚರಿಸಿದರು.


ಸುಮಾರು 90 ಕ್ಕೂ ವಿಕ್ಕಿ ಯೋಗ ಬಂಧುಗಳು ಗೋಶಾಲೆಯನ್ನು ಹಾಗೂ ಗೋವುಗಳನ್ನು ಸ್ವಚ್ಛಗೊಳಿಸಿ ಗೋಮಾತೆಗೆ ಅಲಂಕಾರ ಮಾಡಿ ಆರತಿಯನ್ನು ಬೆಳಗಿ ಗೋಗ್ರಾಸವನ್ನು ನೀಡುವ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಯೋಗ ಬಂಧುಗಳಾದ ವಸಂತ ಕೆಂಬರ್ಜೆ ದಂಪತಿಗಳು ಗೋಪೂಜೆಯ ಮುಂದಾಳತ್ವ ವನ್ನು ವಹಿಸಿದರು.
ಜಿಲ್ಲಾ ಸಮಿತಿಯ ಮಾರ್ಗದರ್ಶನದೊಂದಿಗೆ ಯೋಗ ತರಗತಿಯ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಇವರ ನೇತೃತ್ವದಲ್ಲಿ ಸಹ ಶಿಕ್ಷಕರುಗಳಾದ ಸಂತೋಷ ಕಾಪಿನಡ್ಕ ,ಸುಕೇಶ್ ಗೇರುಕಟ್ಟೆ, ಶಶಿಕಲಾ ವಿಶ್ವನಾಥ್, ಕೋಮಲ ಪ್ರಕಾಶ್, ಗಣೇಶ್ ಪ್ರಸಾದ್, ರಕ್ಷಿತಾ ಪ್ರಸಾದ್ ಇವರ ಸಹಕಾರದೊಂದಿಗೆ ಈ ಕಾರ್ಯಕ್ರಮವು ಸಂಪನ್ನಗೊಂಡಿತು. ಗೋಶಾಲೆಯ ಸಿಬ್ಬಂದಿಗಳು ಸಂಪೂರ್ಣ ಸಹಕಾರವನ್ನು ನೀಡಿದರು. ಯೋಗ ಬಂಧುಗಳಾದ ಅಶ್ವಥ್ ಇವರು ಗೋ ಪೂಜೆಯ ಮಹತ್ವ ಹಾಗೂ ಅವಶ್ಯಕತೆಯ ಬಗ್ಗೆ ಬೌದ್ಧಿಕವನ್ನು ನೀಡಿದರು. ಹಾಗೂ ಶ್ರೀಮತಿ ರವಿಕಲ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

Suddi Udaya
error: Content is protected !!