37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ 2:30ಕ್ಕೆ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ KA-70-0694 ನಂಬರಿನ ಆಟೋ ರಿಕ್ಷಾವನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ(27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ.

ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು. ಆಟೋದ ಮೌಲ್ಯ ರೂಪಾಯಿ 2,50,000 ಮತ್ತು ಗೋಮಾಂಸದ ಮೌಲ್ಯ 21,250 ರೂಪಾಯಿ ಅಗಿದ್ದು ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 12 ಕರ್ನಾಟಕ ಗೋವಧೆ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ ನೇತೃತ್ವದ ಸಬ್ ಇನ್ಸ್‌ಪೆಕ್ಟರ್ ಆನಂದ.ಎಮ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ಭಾಗವಹಿಸಿದರು

Related posts

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!