25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ 2:30ಕ್ಕೆ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ KA-70-0694 ನಂಬರಿನ ಆಟೋ ರಿಕ್ಷಾವನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ(27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ.

ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು. ಆಟೋದ ಮೌಲ್ಯ ರೂಪಾಯಿ 2,50,000 ಮತ್ತು ಗೋಮಾಂಸದ ಮೌಲ್ಯ 21,250 ರೂಪಾಯಿ ಅಗಿದ್ದು ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 12 ಕರ್ನಾಟಕ ಗೋವಧೆ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ ನೇತೃತ್ವದ ಸಬ್ ಇನ್ಸ್‌ಪೆಕ್ಟರ್ ಆನಂದ.ಎಮ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ಭಾಗವಹಿಸಿದರು

Related posts

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya
error: Content is protected !!