37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯ

ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ:-

ಸೌತಡ್ಕ : ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಸಮುದಾಯದಿಂದ ದೂರ ಉಳಿಯುವುದು ಮಾನಸಿಕ ಖಿನ್ನತೆಗೆ ಹಾಗೂ ಹಲವು ದ್ವಿತೀಯಾಂತರ ಸಮಸ್ಯೆಗಳಿಗೆ ಒಳಗಾಗಿರುತ್ತಾರೆ. ಇಂತಹ ದಿವ್ಯಾಂಗರನ್ನು ಒಗ್ಗೂಡಿಸಿ ಅವರಿಗೆ ವೈದ್ಯಕೀಯ ಸೌಲಭ್ಯಗಳನ್ನು ನೀಡುವುದರ ಮೂಲಕ ಅವರ ಜೀವನ ಶೈಲಿಯನ್ನು ಸುಲಭಗೊಳಿಸುವ ಪ್ರಯತ್ನ ನಮ್ಮ ಸೇವಾಧಾಮ ಸಂಸ್ಥೆಯಿಂದ ನಿರಂತರವಾಗಿ ನಡೆಯುತ್ತಿದೆ.

ಮಂಗಳೂರು CR 3 (India) private limited ನ ಸೀನಿಯರ್ ಎಚ್ ಆರ್ ಎಕ್ಸಿಕ್ಯೂಟಿವ್ ಶ್ರೀ ಗಣೇಶ್ ಟಿ ರವರು ದೀಪಾವಳಿಯ ವಿಶೇಷತೆ ಬಗ್ಗೆ ತಿಳಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ, ಫಲಾನುಭವಿಗಳಿಗೆ, ಆರೈಕೆದಾರರಿಗೆ ಹಾಗೂ ಸಿಬ್ಬಂದಿವರ್ಗದವರಿಗೆ ವಿಭಿನ್ನ ಚಟುವಟಿಕೆಗಳನ್ನು ಮಾಡಿ ಜೊತೆಗೆ ನೃತ್ಯ ಪ್ರದರ್ಶನವನ್ನು ನೀಡಿ ಎಲ್ಲರನ್ನು ಮನರಂಜಿಸಲಾಯಿತು. ಹಾಗೇ ಮುಂಡಾಜೆಯ ವಿಧ್ಯಾ ಬೆಂಡೆಯವರು ತಮ್ಮ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿಕೊಂಡರು ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ. ಅಮೃತಗಳಿಗೆಯಲ್ಲಿ ಅಮೃತ ಹಸ್ತದಲ್ಲಿ ಹಣತೆಯನ್ನು ಹಚ್ಚಿ ಪಟಾಕಿಯನ್ನು ಸಿಡಿಸಿ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಮುಂಡಾಜೆಯ ಶ್ರೀ ವಿಶ್ವನಾಥ್ ಬೆಂಡೆ, ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್, ಸಂಸ್ಥೆಯ ದಾನಿಗಳು, ಹಿತೈಷಿಗಳು, ಸಲಹಾ ಸಮಿತಿಯ ಸದಸ್ಯರು, ಟ್ರಸ್ಟಿಗಳು, ಫಲಾನುಭವಿಗಳು, ಸನಿವಾಸಿಗಳು, ಆರೈಕೆದಾರರು, ಸ್ವಯಂಸೇವಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಟ್ಟು 70 ಮಂದಿ ಭಾಗವಹಿಸಿದ್ದರು. ಸೇವಾಧಾಮದ ಫಿಸಿಯೊಥೆರಪಿಸ್ಟ್ ಕು. ವಿಖ್ಯಾತಿ ಸ್ವಾಗತಿಸಿ, ನಿರೂಪಿಸಿದರು. ಸೇವಾಭಾರತಿಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ಆಶ್ರಿತ್ ಸಿ.ಪಿ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!