September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ಜೀವನ ಅನ್ನುವಂತಹದ್ದು ಬಹಳ ದೀರ್ಘವಾಗಿವಂತಹದ್ದು ಹೇಳಿ ನಾವು ಯಾವತ್ತೂ ಈ ಭೂಮಿ ಮೇಲೆ ಜನ್ಮ ಪಡೆಯುತ್ತೇವೆ. ಅಥವಾ ಮರಣ ಹೊಂದುತ್ತೇವೆ ಎಂದು ಎರಡು ಸಹ ನಮಗೆ ಗೊತ್ತಿರುವುದಿಲ್ಲ. ಅರ್ಜಿ ಹಾಕಿ ಬರುವಂತದಲ್ಲ, ಅರ್ಜಿ ಹೋಗುವಂತದ್ದಲ್ಲ ಆದರೆ ಈ ಜೀವನಕ್ಕೆ ಬಂದ ಮೇಲೆ ನಾವು ಏನು ಮಾಡಬೇಕು ಅಥವಾ ಏನು ಮಾಡಲು ಬಾರದು ಅನ್ನವಂತಹದ್ದು ತಿಳಿಯಬೇಕು. ಎಲ್ಲರನ್ನೂ ನೆನಪು ಇಟ್ಟುಕೊಳ್ಳುವುದಿಲ್ಲ, ಕೆಲವು ಸಾಧಕರನ್ನು ಮಾತ್ರ ನೆನಪಿಸಿಕೊಳ್ಳುತ್ತಾರೆ. ಇವತ್ತಿನ ಬದಲಾದ ಜೀವನ ಶೈಲಿಯಲ್ಲಿ ಬೇರೆ ಎಲ್ಲ ವೃತ್ತಿಕ್ಕಿಂತ ಸ್ವಂತ ಉದ್ಯಮ ಮಾಡುವುದೇ ಸೂಕ್ತ ಎಂದು ಭಾವಿಸುತ್ತದೆ. ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಶೇಕಾಡ 83 ಜನ ಸ್ವಂತ ಉದ್ಯಮಿಗಳು ಇದ್ದಾರೆ. ಹಾಗಾಗಿ ಈ ಉದ್ಯಮ ನಡೆಸಲು ನಿಮ್ಮ ವರ್ತನೆಯ ಮೇಲೆ ಹೆಚ್ಚಿನ ಗಮನ ಇರಿಸಬೇಕು. ನಿಮ್ಮಲ್ಲಿ ಉತ್ತಮ ಮನೋಭಾವ ಇದ್ದರೆ ಸಾಧನೆ ಸುಲಭ ಸಾಧ್ಯ. ವೃತ್ತಿಯಲ್ಲಿ ನಿರಂತರ ಕಲಿಕೆ ಇರುಬೇಕು ಅದಕ್ಕೆ ಕುತೂಹಲ ಇರಬೇಕು. ವೃತ್ತಿಯಲ್ಲಿ ಸ್ವಯಂ ಶಿಸ್ತು ಅಳವಡಿಸಿಕೊಳ್ಳಬೇಕು ಹಾಗೂ ವ್ಯವಹಾರದಲ್ಲಿ ಬದ್ಧತೆ ಇಟ್ಟುಕೊಂಡು ಮುಂದುವರೆಯಬೇಕು. ಉದ್ಯಮದಲ್ಲಿ ಕೆಲವೊಂದು ಸಲ ಸಮಸ್ಯೆಗಳು ಬರುತ್ತೇವೆ. ನಿಮ್ಮ ಕೆಲಸ ಜನರ ಸಮಸ್ಯೆಗಳಿಗೆ ಸ್ವಂದಿಸಿ ಉತ್ತಮ ಸೇವೆಯನ್ನು ಕೊಡಿ ಎಂದು ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ), ಪ್ರಾಶುಂಪಾಲರಾದ ವಿಶ್ವೇಶ್ವರ ಪ್ರಸಾದ್ ಅಭಿಪ್ರಾಯಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಅವರು ಸ್ವಾಗತಿಸಿದರು. ಸಂಸ್ಥೆಯ ಉಪನ್ಯಾಸಕ ಕೆ.ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿದರು ವಂದಿಸಿದರು. ತೇಜಸ್ಸು ಪ್ರಾರ್ಥನೆ ಮಾಡಿದರು, ಆನಂದ, ರೋಹಿತ್, ಸಂಗಮೇಶ್ ತರಬೇತಿಯ ಅನುಭವ ಹಂಚಿಕೊಂಡರು.

Related posts

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!