25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ಉಜಿರೆಯಲ್ಲಿ ಅ.18 ರಂದು ದೀಪಾವಳಿ ಹಬ್ಬ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ದೀಪಾವಳಿಯ ಹಿನ್ನೆಲೆಯನ್ನು ವಿವರಿಸಿದರು.

ಶತಮಾನಗಳಿಂದ ಆಚರಿಸಲಾಗುತ್ತಿರುವ ಈ ಹಬ್ಬ ಜೀವನದಲ್ಲಿ ಹೊಸತನ, ಚೈತನ್ಯ ಮತ್ತು ನೆಮ್ಮದಿಯ ಬೆಳಕನ್ನು ತುಂಬುತ್ತದೆ ಎಂದರು.

ಕಾರ್ಯಕ್ರಮದ ಅತಿಥಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕರು ಕಿರಿಯಾಡಿ ಶ್ರೀಮತಿ ರಾಜೇಶ್ವರಿ ಮಾತನಾಡಿ, ದೀಪಾವಳಿ ಹಬ್ಬವು ಕೇವಲ ಭಾರತದಲ್ಲೇ ಅಲ್ಲ, ವಿಶ್ವದಾದ್ಯಂತ ಸಂತೋಷದಿಂದ ಆಚರಿಸಲಾಗುತ್ತಿರುವ ಹಬ್ಬ. ದೀಪಾವಳಿಯ ಆಚರಣೆಯು ಕೇವಲ ಹಬ್ಬವಲ್ಲ, ನಮ್ಮ ಸಂಸ್ಕೃತಿ ಸಂಸ್ಕಾರ. ನಮ್ಮ ಆಚರಣೆಗಳ ಹಿನ್ನಲೆ ತಿಳಿದುಕೊಂಡು ಆಚರಣೆಗಳನ್ನು ಮುಂದುವರೆಸುತ್ತಾ ಬರುವುದು ನಮ್ಮ ಕರ್ತವ್ಯ ಎಂದರು.

ದೀಪಾವಳಿ ಹಬ್ಬ ಜೀವನದಲ್ಲಿ ಬೆಳಕು, ಸತ್ಯ ಮತ್ತು ಧನಾತ್ಮಕ ಚಿಂತನೆಯ ಸಂದೇಶವನ್ನು ಸಾರುತ್ತದೆ ಎಂದರು.
ವಿದ್ಯಾರ್ಥಿ ತೌಫೀರಾ ಸ್ವಾಗತಿಸಿ, ತಸ್ಮಯಿ ಅತಿಥಿ ಪರಿಚಯಿಸಿದರು.ಫಾಯೀಝಾ ವಂದಿಸಿದರು. ಸಚಿತ್ ಭಟ್ ನಿರೂಪಿಸಿದರು.

ವಿದ್ಯಾರ್ಥಿಗಳು ಕುಣಿತ ಭಜನೆ, ಸಾಂಸ್ಕೃತಿಕ ನೃತ್ಯ, ದೀಪಾವಳಿ ದಿನಗಳ ವಿಶೇಷತೆಯ ವಾಚನ ಮಾಡಲಾಯಿತು. ಮಕ್ಕಳೇ ರಚಿಸಿದ ಗೂಡುದೀಪಗಳ ಅಲಂಕಾರ, ತಳಿರುತೋರಣ ದೀಪಾವಳಿ ಆಚರಣೆಗೆ ವಿಶೇಷ ಮೆರುಗು ತಂದಿತು.ವಿದ್ಯಾರ್ಥಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಕಿರಣ್ ಚಂದ್ರ ಪುಷ್ಪಗಿರಿ ರವರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!