23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ಉಜಿರೆಯಲ್ಲಿ ಅ.18 ರಂದು ದೀಪಾವಳಿ ಹಬ್ಬ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ದೀಪಾವಳಿಯ ಹಿನ್ನೆಲೆಯನ್ನು ವಿವರಿಸಿದರು.

ಶತಮಾನಗಳಿಂದ ಆಚರಿಸಲಾಗುತ್ತಿರುವ ಈ ಹಬ್ಬ ಜೀವನದಲ್ಲಿ ಹೊಸತನ, ಚೈತನ್ಯ ಮತ್ತು ನೆಮ್ಮದಿಯ ಬೆಳಕನ್ನು ತುಂಬುತ್ತದೆ ಎಂದರು.

ಕಾರ್ಯಕ್ರಮದ ಅತಿಥಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕರು ಕಿರಿಯಾಡಿ ಶ್ರೀಮತಿ ರಾಜೇಶ್ವರಿ ಮಾತನಾಡಿ, ದೀಪಾವಳಿ ಹಬ್ಬವು ಕೇವಲ ಭಾರತದಲ್ಲೇ ಅಲ್ಲ, ವಿಶ್ವದಾದ್ಯಂತ ಸಂತೋಷದಿಂದ ಆಚರಿಸಲಾಗುತ್ತಿರುವ ಹಬ್ಬ. ದೀಪಾವಳಿಯ ಆಚರಣೆಯು ಕೇವಲ ಹಬ್ಬವಲ್ಲ, ನಮ್ಮ ಸಂಸ್ಕೃತಿ ಸಂಸ್ಕಾರ. ನಮ್ಮ ಆಚರಣೆಗಳ ಹಿನ್ನಲೆ ತಿಳಿದುಕೊಂಡು ಆಚರಣೆಗಳನ್ನು ಮುಂದುವರೆಸುತ್ತಾ ಬರುವುದು ನಮ್ಮ ಕರ್ತವ್ಯ ಎಂದರು.

ದೀಪಾವಳಿ ಹಬ್ಬ ಜೀವನದಲ್ಲಿ ಬೆಳಕು, ಸತ್ಯ ಮತ್ತು ಧನಾತ್ಮಕ ಚಿಂತನೆಯ ಸಂದೇಶವನ್ನು ಸಾರುತ್ತದೆ ಎಂದರು.
ವಿದ್ಯಾರ್ಥಿ ತೌಫೀರಾ ಸ್ವಾಗತಿಸಿ, ತಸ್ಮಯಿ ಅತಿಥಿ ಪರಿಚಯಿಸಿದರು.ಫಾಯೀಝಾ ವಂದಿಸಿದರು. ಸಚಿತ್ ಭಟ್ ನಿರೂಪಿಸಿದರು.

ವಿದ್ಯಾರ್ಥಿಗಳು ಕುಣಿತ ಭಜನೆ, ಸಾಂಸ್ಕೃತಿಕ ನೃತ್ಯ, ದೀಪಾವಳಿ ದಿನಗಳ ವಿಶೇಷತೆಯ ವಾಚನ ಮಾಡಲಾಯಿತು. ಮಕ್ಕಳೇ ರಚಿಸಿದ ಗೂಡುದೀಪಗಳ ಅಲಂಕಾರ, ತಳಿರುತೋರಣ ದೀಪಾವಳಿ ಆಚರಣೆಗೆ ವಿಶೇಷ ಮೆರುಗು ತಂದಿತು.ವಿದ್ಯಾರ್ಥಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya
error: Content is protected !!