25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ಉಜಿರೆಯಲ್ಲಿ ಅ.18 ರಂದು ದೀಪಾವಳಿ ಹಬ್ಬ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ದೀಪಾವಳಿಯ ಹಿನ್ನೆಲೆಯನ್ನು ವಿವರಿಸಿದರು.

ಶತಮಾನಗಳಿಂದ ಆಚರಿಸಲಾಗುತ್ತಿರುವ ಈ ಹಬ್ಬ ಜೀವನದಲ್ಲಿ ಹೊಸತನ, ಚೈತನ್ಯ ಮತ್ತು ನೆಮ್ಮದಿಯ ಬೆಳಕನ್ನು ತುಂಬುತ್ತದೆ ಎಂದರು.

ಕಾರ್ಯಕ್ರಮದ ಅತಿಥಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕರು ಕಿರಿಯಾಡಿ ಶ್ರೀಮತಿ ರಾಜೇಶ್ವರಿ ಮಾತನಾಡಿ, ದೀಪಾವಳಿ ಹಬ್ಬವು ಕೇವಲ ಭಾರತದಲ್ಲೇ ಅಲ್ಲ, ವಿಶ್ವದಾದ್ಯಂತ ಸಂತೋಷದಿಂದ ಆಚರಿಸಲಾಗುತ್ತಿರುವ ಹಬ್ಬ. ದೀಪಾವಳಿಯ ಆಚರಣೆಯು ಕೇವಲ ಹಬ್ಬವಲ್ಲ, ನಮ್ಮ ಸಂಸ್ಕೃತಿ ಸಂಸ್ಕಾರ. ನಮ್ಮ ಆಚರಣೆಗಳ ಹಿನ್ನಲೆ ತಿಳಿದುಕೊಂಡು ಆಚರಣೆಗಳನ್ನು ಮುಂದುವರೆಸುತ್ತಾ ಬರುವುದು ನಮ್ಮ ಕರ್ತವ್ಯ ಎಂದರು.

ದೀಪಾವಳಿ ಹಬ್ಬ ಜೀವನದಲ್ಲಿ ಬೆಳಕು, ಸತ್ಯ ಮತ್ತು ಧನಾತ್ಮಕ ಚಿಂತನೆಯ ಸಂದೇಶವನ್ನು ಸಾರುತ್ತದೆ ಎಂದರು.
ವಿದ್ಯಾರ್ಥಿ ತೌಫೀರಾ ಸ್ವಾಗತಿಸಿ, ತಸ್ಮಯಿ ಅತಿಥಿ ಪರಿಚಯಿಸಿದರು.ಫಾಯೀಝಾ ವಂದಿಸಿದರು. ಸಚಿತ್ ಭಟ್ ನಿರೂಪಿಸಿದರು.

ವಿದ್ಯಾರ್ಥಿಗಳು ಕುಣಿತ ಭಜನೆ, ಸಾಂಸ್ಕೃತಿಕ ನೃತ್ಯ, ದೀಪಾವಳಿ ದಿನಗಳ ವಿಶೇಷತೆಯ ವಾಚನ ಮಾಡಲಾಯಿತು. ಮಕ್ಕಳೇ ರಚಿಸಿದ ಗೂಡುದೀಪಗಳ ಅಲಂಕಾರ, ತಳಿರುತೋರಣ ದೀಪಾವಳಿ ಆಚರಣೆಗೆ ವಿಶೇಷ ಮೆರುಗು ತಂದಿತು.ವಿದ್ಯಾರ್ಥಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya
error: Content is protected !!