23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಮೋಹನ್ ಪಿಬಿ, ಮಹೇಶ್ ಗುತ್ತಿಗಾರು, ನಿಡ್ಲೆಯ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ ಜೈನಾಬಿ, ಬದಿಯಡ್ಕದ ಚಂದ್ರಶೇಖರ್, ಕಡಬದ ಧನಂಜಯ ಮತ್ತು ಯೋಗೀಶ್ ಎರ್ಮಲ್ ರವರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮವನ್ನು ಅ. 20 ದೀಪಾವಳಿ ಹಬ್ಬದಂದು ಸೌತಡ್ಕ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುತ್ತೂರಿನ ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಶ್ರೀಮತಿ ರೂಪಲೇಖರವರು ಗಾಲಿಕುರ್ಚಿಗಳನ್ನು ಹಸ್ತಾಂತರಿಸಿ ಫಲಾನುಭವಿಗಳಿಗೆ ವಿಶ್ವಾಸ ಬದುಕಿಗಾಗಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್, ಬೆನ್ನು ಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಆರೈಕೆದಾರರು, ಫಲಾನುಭವಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya
error: Content is protected !!