September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೈಪಾಡಿಯ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಸರಕಾರಿ ಪ್ರೌಢ ಶಾಲೆ ಬೈಪಾಡಿ ಯಲ್ಲಿ ನಡೆಸಲಾಯಿತು.

ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ನಮ್ಮ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿಶೇಷ ತರಗತಿಯ ಅವಕಾಶಗಳು ಇಲ್ಲದೆ ಇದ್ದು ಈ ಒಂದು ವಿಶೇಷ ತರಗತಿಯು ಮಕ್ಕಳ ಎಸ್.ಎಸ್.ಎಲ್.ಸಿ ಫಲಿತಾಂಶ ವನ್ನು ಉತ್ತಮ ರೀತಿಯಲ್ಲಿ ಪಡೆಯಲು ಅವಕಾಶವಾಗಿದೆ ಎಲ್ಲಾ ಮಕ್ಕಳು ವಿಶೇಷ ತರಗತಿಯ ಪ್ರಯೋಜನ ಪಡೆಯುವಂತೆ ತಿಳಿಸಿದರು.

ವಲಯ ಮೇಲ್ವಿಚಾರಕರಾದ ಪೂರ್ಣಿಮಾ ರವರು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಲ್ಲಾ ಮಕ್ಕಳು ವಿಶೇಷ ತರಗತಿಯನ್ನು ಪಡೆದು ಉತ್ತಮ ಅಂಕ ಗಳಿಸುವಂತೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಒಕ್ಕೂಟ ಅಧ್ಯಕ್ಷ ಶಶಿಧರ ರವರು ತಮ್ಮ ಊರಿನ ಮಕ್ಕಳಿಗಾಗಿ ನಡೆಸಲಾಗುವ ಈ ಕಾರ್ಯಕ್ರಮದಿಂದ ಶಾಲೆಯಲ್ಲಿ ಉತ್ತಮ ಫಲಿತಾಂಶ ಸಿಗಲಿ ಎಂದು ತಿಳಿಸುತ್ತ ಸಂತಸ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಒಕ್ಕೂಟ ಉಪಾಧ್ಯಕ್ಷ ದಿನೇಶ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಕಾರ್ಯಕ್ರಮ ನಿರೂಪಿಸಿದರು. ಪ್ರಮೀಳಾ ಸೇವಾಪ್ರತಿನಿಧಿ ಸ್ವಾಗತಿಸಿ, ವಿಶೇಷ ತರಗತಿ ಶಿಕ್ಷಕ ಮೇದ ಧನ್ಯವಾದ ನೀಡಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya
error: Content is protected !!