23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೈಪಾಡಿಯ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಸರಕಾರಿ ಪ್ರೌಢ ಶಾಲೆ ಬೈಪಾಡಿ ಯಲ್ಲಿ ನಡೆಸಲಾಯಿತು.

ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ನಮ್ಮ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿಶೇಷ ತರಗತಿಯ ಅವಕಾಶಗಳು ಇಲ್ಲದೆ ಇದ್ದು ಈ ಒಂದು ವಿಶೇಷ ತರಗತಿಯು ಮಕ್ಕಳ ಎಸ್.ಎಸ್.ಎಲ್.ಸಿ ಫಲಿತಾಂಶ ವನ್ನು ಉತ್ತಮ ರೀತಿಯಲ್ಲಿ ಪಡೆಯಲು ಅವಕಾಶವಾಗಿದೆ ಎಲ್ಲಾ ಮಕ್ಕಳು ವಿಶೇಷ ತರಗತಿಯ ಪ್ರಯೋಜನ ಪಡೆಯುವಂತೆ ತಿಳಿಸಿದರು.

ವಲಯ ಮೇಲ್ವಿಚಾರಕರಾದ ಪೂರ್ಣಿಮಾ ರವರು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಲ್ಲಾ ಮಕ್ಕಳು ವಿಶೇಷ ತರಗತಿಯನ್ನು ಪಡೆದು ಉತ್ತಮ ಅಂಕ ಗಳಿಸುವಂತೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಒಕ್ಕೂಟ ಅಧ್ಯಕ್ಷ ಶಶಿಧರ ರವರು ತಮ್ಮ ಊರಿನ ಮಕ್ಕಳಿಗಾಗಿ ನಡೆಸಲಾಗುವ ಈ ಕಾರ್ಯಕ್ರಮದಿಂದ ಶಾಲೆಯಲ್ಲಿ ಉತ್ತಮ ಫಲಿತಾಂಶ ಸಿಗಲಿ ಎಂದು ತಿಳಿಸುತ್ತ ಸಂತಸ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಒಕ್ಕೂಟ ಉಪಾಧ್ಯಕ್ಷ ದಿನೇಶ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಕಾರ್ಯಕ್ರಮ ನಿರೂಪಿಸಿದರು. ಪ್ರಮೀಳಾ ಸೇವಾಪ್ರತಿನಿಧಿ ಸ್ವಾಗತಿಸಿ, ವಿಶೇಷ ತರಗತಿ ಶಿಕ್ಷಕ ಮೇದ ಧನ್ಯವಾದ ನೀಡಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya
error: Content is protected !!