March 7, 2026
Uncategorized

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

ಶಿರ್ಲಾಲು: ಮೊಬೈಲ್ ಟವರ್ ಸರಬರಾಜು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮೊಬೈಲ್ ಟವರಲ್ಲಿ ಗಿಡಗಂಟಿ, ಬಳ್ಳಿಗಳು ಬೆಳೆದು ಮುತ್ತಿಕೊಂಡು, ಮೊಬೈಲ್ ಟವರನ್ನೇ ಬಳ್ಳಿಗಳು ನುಂಗಿ ಅಪಾಯಕ್ಕೆ ಆಹ್ವಾನ ನೀಡುವಂತಿವೆ.

ಶಿರ್ಲಾಲು ಗ್ರಾಮ ಪಂಚಾಯತ್ ನ ಪಕ್ಕದಲ್ಲಿರುವ ಮೊಬೈಲ್ ಟವರ್ ನ ಬುಡದಿಂದ ಕೊಡಿಯವರೆಗೆ ಸಂಪೂರ್ಣ ಬಳ್ಳಿಗಳು ಮುತ್ತಿಕೊಂಡಿದೆ. ಈ ರೀತಿ ಬಳ್ಳಿಗಳು ಬೆಳೆಯಲು ಸುಮಾರು ಸಮಯ ಬೇಕಾಗುತ್ತೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿದೆ ಹೋಗಿದ್ದು ಮಾತ್ರ ವಿಪರ್ಯಾಸ ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ಸಮಯದಲ್ಲಿ ಶಿರ್ಲಾಲು ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಎಲ್ಲರಿಗೂ ತೊಂದರೆಯಾಗಿದೆ. ಶಿರ್ಲಾಲುವಿನ‌ ಸಾರ್ವಜನಿಕರು ಎಷ್ಟೋ ಸಲ ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯ ಗಂಭೀರತೆ ಬಗ್ಗೆ ತಿಳಿಸಿದರು ಯಾವುದೇ ಪ್ರಯೋಜನವಾಗಲಿಲ್ಲ. ಈ ರೀತಿ ಟವರಲ್ಲಿ ಬಳ್ಳಿಗಳು ಬೆಳೆದರೆ ನೆಟ್ವರ್ಕ್ ಬರುವುದಾದರೂ ಹೇಗೆ ಎಂದು ಸಾರ್ವಜನಿಕರು ಮಾತಾಡುತ್ತಿದ್ದಾರೆ‌.

ಮೊಬೈಲ್ ಟವರ್ ಸುತ್ತ ಮರಗಳು ಬೆಳೆದಿದೆ. ಜೊತೆಗೆ ಬಳ್ಳಿಗಳ ರಾಶಿಯಿದೆ. ಆದರೂ ಇದರ ಬಗ್ಗೆ ಗಮನಹರಿಸುವವರು ಅಥವಾ ಕೇಳುವವರು ಇಲ್ಲದಾಗಿದೆ. ಜನರಿಗೆ ಪ್ರಯೋಜನವಾಗದ ಮೊಬೈಲ್ ಟವರ್ ಇದ್ದರೇನು, ಬಿಟ್ಟರೇನು ಎಂದು ಜನರು ಅಧಿಕಾರಿಗಳನ್ನು ದೂರುತ್ತಿದ್ದಾರೆ.

Related posts

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya
error: Content is protected !!