September 6, 2026
Uncategorized

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

ಶಿರ್ಲಾಲು: ಮೊಬೈಲ್ ಟವರ್ ಸರಬರಾಜು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮೊಬೈಲ್ ಟವರಲ್ಲಿ ಗಿಡಗಂಟಿ, ಬಳ್ಳಿಗಳು ಬೆಳೆದು ಮುತ್ತಿಕೊಂಡು, ಮೊಬೈಲ್ ಟವರನ್ನೇ ಬಳ್ಳಿಗಳು ನುಂಗಿ ಅಪಾಯಕ್ಕೆ ಆಹ್ವಾನ ನೀಡುವಂತಿವೆ.

ಶಿರ್ಲಾಲು ಗ್ರಾಮ ಪಂಚಾಯತ್ ನ ಪಕ್ಕದಲ್ಲಿರುವ ಮೊಬೈಲ್ ಟವರ್ ನ ಬುಡದಿಂದ ಕೊಡಿಯವರೆಗೆ ಸಂಪೂರ್ಣ ಬಳ್ಳಿಗಳು ಮುತ್ತಿಕೊಂಡಿದೆ. ಈ ರೀತಿ ಬಳ್ಳಿಗಳು ಬೆಳೆಯಲು ಸುಮಾರು ಸಮಯ ಬೇಕಾಗುತ್ತೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿದೆ ಹೋಗಿದ್ದು ಮಾತ್ರ ವಿಪರ್ಯಾಸ ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ಸಮಯದಲ್ಲಿ ಶಿರ್ಲಾಲು ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಎಲ್ಲರಿಗೂ ತೊಂದರೆಯಾಗಿದೆ. ಶಿರ್ಲಾಲುವಿನ‌ ಸಾರ್ವಜನಿಕರು ಎಷ್ಟೋ ಸಲ ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯ ಗಂಭೀರತೆ ಬಗ್ಗೆ ತಿಳಿಸಿದರು ಯಾವುದೇ ಪ್ರಯೋಜನವಾಗಲಿಲ್ಲ. ಈ ರೀತಿ ಟವರಲ್ಲಿ ಬಳ್ಳಿಗಳು ಬೆಳೆದರೆ ನೆಟ್ವರ್ಕ್ ಬರುವುದಾದರೂ ಹೇಗೆ ಎಂದು ಸಾರ್ವಜನಿಕರು ಮಾತಾಡುತ್ತಿದ್ದಾರೆ‌.

ಮೊಬೈಲ್ ಟವರ್ ಸುತ್ತ ಮರಗಳು ಬೆಳೆದಿದೆ. ಜೊತೆಗೆ ಬಳ್ಳಿಗಳ ರಾಶಿಯಿದೆ. ಆದರೂ ಇದರ ಬಗ್ಗೆ ಗಮನಹರಿಸುವವರು ಅಥವಾ ಕೇಳುವವರು ಇಲ್ಲದಾಗಿದೆ. ಜನರಿಗೆ ಪ್ರಯೋಜನವಾಗದ ಮೊಬೈಲ್ ಟವರ್ ಇದ್ದರೇನು, ಬಿಟ್ಟರೇನು ಎಂದು ಜನರು ಅಧಿಕಾರಿಗಳನ್ನು ದೂರುತ್ತಿದ್ದಾರೆ.

Related posts

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಅರಸಿನಮಕ್ಕಿ ಸೇವಾ ಟ್ರಸ್ಟ್ ವತಿಯಿಂದ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!