23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

ಶಿರ್ಲಾಲು: ಮೊಬೈಲ್ ಟವರ್ ಸರಬರಾಜು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮೊಬೈಲ್ ಟವರಲ್ಲಿ ಗಿಡಗಂಟಿ, ಬಳ್ಳಿಗಳು ಬೆಳೆದು ಮುತ್ತಿಕೊಂಡು, ಮೊಬೈಲ್ ಟವರನ್ನೇ ಬಳ್ಳಿಗಳು ನುಂಗಿ ಅಪಾಯಕ್ಕೆ ಆಹ್ವಾನ ನೀಡುವಂತಿವೆ.

ಶಿರ್ಲಾಲು ಗ್ರಾಮ ಪಂಚಾಯತ್ ನ ಪಕ್ಕದಲ್ಲಿರುವ ಮೊಬೈಲ್ ಟವರ್ ನ ಬುಡದಿಂದ ಕೊಡಿಯವರೆಗೆ ಸಂಪೂರ್ಣ ಬಳ್ಳಿಗಳು ಮುತ್ತಿಕೊಂಡಿದೆ. ಈ ರೀತಿ ಬಳ್ಳಿಗಳು ಬೆಳೆಯಲು ಸುಮಾರು ಸಮಯ ಬೇಕಾಗುತ್ತೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿದೆ ಹೋಗಿದ್ದು ಮಾತ್ರ ವಿಪರ್ಯಾಸ ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ಸಮಯದಲ್ಲಿ ಶಿರ್ಲಾಲು ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಎಲ್ಲರಿಗೂ ತೊಂದರೆಯಾಗಿದೆ. ಶಿರ್ಲಾಲುವಿನ‌ ಸಾರ್ವಜನಿಕರು ಎಷ್ಟೋ ಸಲ ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯ ಗಂಭೀರತೆ ಬಗ್ಗೆ ತಿಳಿಸಿದರು ಯಾವುದೇ ಪ್ರಯೋಜನವಾಗಲಿಲ್ಲ. ಈ ರೀತಿ ಟವರಲ್ಲಿ ಬಳ್ಳಿಗಳು ಬೆಳೆದರೆ ನೆಟ್ವರ್ಕ್ ಬರುವುದಾದರೂ ಹೇಗೆ ಎಂದು ಸಾರ್ವಜನಿಕರು ಮಾತಾಡುತ್ತಿದ್ದಾರೆ‌.

ಮೊಬೈಲ್ ಟವರ್ ಸುತ್ತ ಮರಗಳು ಬೆಳೆದಿದೆ. ಜೊತೆಗೆ ಬಳ್ಳಿಗಳ ರಾಶಿಯಿದೆ. ಆದರೂ ಇದರ ಬಗ್ಗೆ ಗಮನಹರಿಸುವವರು ಅಥವಾ ಕೇಳುವವರು ಇಲ್ಲದಾಗಿದೆ. ಜನರಿಗೆ ಪ್ರಯೋಜನವಾಗದ ಮೊಬೈಲ್ ಟವರ್ ಇದ್ದರೇನು, ಬಿಟ್ಟರೇನು ಎಂದು ಜನರು ಅಧಿಕಾರಿಗಳನ್ನು ದೂರುತ್ತಿದ್ದಾರೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya
error: Content is protected !!