25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

ಉಜಿರೆ: ಬೆನಕ ಹೆಲ್ತ್ ಸೆಂಟರ್ ಉಜಿರೆ ವತಿಯಿಂದ ಅದರ ರಜತ ಮಹೋತ್ಸವ ಮತ್ತು ದೀಪಾವಳಿ ಪ್ರಯುಕ್ತ ಸಾಂಪ್ರದಾಯಿಕ ಪೂಜೆಯೊಂದಿಗೆ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣ ರವರು ಮಾತನಾಡುತ್ತ ಆಂಬುಲೆನ್ಸ್ ಚಾಲಕರು ನಿಜವಾದ ಅರ್ಥದಲ್ಲಿ ಜೀವರಕ್ಷಕರು ಯಾವುದೇ ಕಾಲವಿರಲಿ , ಯಾವುದೇ ಸಮಯವಿರಲಿ ಕರೆದಾಗ ಯಾವುದೇ ಹಳ್ಳಿಯ ಮೂಲೆಯಲ್ಲೂ ಸ್ಪಂದಿಸಿ ರೋಗಿಗಳನ್ನು ಆಸ್ಪತ್ರೆಗೆ ತುರ್ತಾಗಿ ಸೇರಿಸಿ ಅವರ ಜೀವವನ್ನು ಉಳಿಸುವ ಕಾರ್ಯ ಸದಾ ಸುಸ್ತ್ಯಾರ್ಹ ಮತ್ತು ಅಭಿನಂದನೀಯ ಎಂದು ಎಲ್ಲ ಆಂಬುಲೆನ್ಸ್ ಚಾಲಕರ ಈ ಸೇವೆಯನ್ನು ಸ್ಮರಿಸಿದರು .
ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಹಿರಿಯ ಆಂಬುಲೆನ್ಸ್ ಚಾಲಕರಾದ ಅಬ್ದುಲ್ ಹಮೀದರವರನ್ನು ಶಾಲು ಹೊದಿಸಿ , ಫಲಪುಷ್ಪ & ಸ್ಮರಣಿಕೆ ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು .

ಈ ಸಂದರ್ಭದಲ್ಲಿ ಹಮೀದ್ ರವರು ತನ್ನ ಪ್ರಾರಂಭದ ದಿನಗಳಲ್ಲಿ ಬೆನಕ ಆಸ್ಪತ್ರೆ ನೀಡಿದ ಸಹಕಾರ ಮತ್ತು ಡಾ.ಗೋಪಾಲಕೃಷ್ಣ ರವರು ತೋರಿದ ಪ್ರೀತಿ ವಿಶ್ವಾಸವನ್ನು ನೆನಪಿಸಿ ಕೊಂಡು ಈ ಆಸ್ಪತ್ರೆ ಇನ್ನಷ್ಟು ಬೆಳೆದು ಇನ್ನು ಹೆಚ್ಚಿನ ರೋಗಿಗಳ ಪಾಲಿಗೆ ವರದಾನವಾಗಲಿ ಎಂದು ಆಶಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ 20 ಕ್ಕೂ ಹೆಚ್ಚು ಆಂಬುಲೆನ್ಸ್ ಚಾಲಕರನ್ನು ಪ್ರತ್ಯೇಕವಾಗಿ ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು . ಈ ಕಾರ್ಯಕ್ರಮದಲ್ಲಿ ಡಾ.ಭಾರತಿ ಜಿ ಕೆ ಮತ್ತು ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು . ಎಸ್ .ಜಿ ಭಟ್ ಸಾರ್ವಜನಿಕ ಸಂಪರ್ಕಾಧಿಕಾರಿ ಸ್ವಾಗತಿಸಿ ವಂದಿಸಿದರು.

Related posts

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya
error: Content is protected !!