September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ಉಜಿರೆಯಲ್ಲಿ ಅ.18 ರಂದು ದೀಪಾವಳಿ ಹಬ್ಬ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ದೀಪಾವಳಿಯ ಹಿನ್ನೆಲೆಯನ್ನು ವಿವರಿಸಿದರು.

ಶತಮಾನಗಳಿಂದ ಆಚರಿಸಲಾಗುತ್ತಿರುವ ಈ ಹಬ್ಬ ಜೀವನದಲ್ಲಿ ಹೊಸತನ, ಚೈತನ್ಯ ಮತ್ತು ನೆಮ್ಮದಿಯ ಬೆಳಕನ್ನು ತುಂಬುತ್ತದೆ ಎಂದರು.

ಕಾರ್ಯಕ್ರಮದ ಅತಿಥಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕರು ಕಿರಿಯಾಡಿ ಶ್ರೀಮತಿ ರಾಜೇಶ್ವರಿ ಮಾತನಾಡಿ, ದೀಪಾವಳಿ ಹಬ್ಬವು ಕೇವಲ ಭಾರತದಲ್ಲೇ ಅಲ್ಲ, ವಿಶ್ವದಾದ್ಯಂತ ಸಂತೋಷದಿಂದ ಆಚರಿಸಲಾಗುತ್ತಿರುವ ಹಬ್ಬ. ದೀಪಾವಳಿಯ ಆಚರಣೆಯು ಕೇವಲ ಹಬ್ಬವಲ್ಲ, ನಮ್ಮ ಸಂಸ್ಕೃತಿ ಸಂಸ್ಕಾರ. ನಮ್ಮ ಆಚರಣೆಗಳ ಹಿನ್ನಲೆ ತಿಳಿದುಕೊಂಡು ಆಚರಣೆಗಳನ್ನು ಮುಂದುವರೆಸುತ್ತಾ ಬರುವುದು ನಮ್ಮ ಕರ್ತವ್ಯ ಎಂದರು.

ದೀಪಾವಳಿ ಹಬ್ಬ ಜೀವನದಲ್ಲಿ ಬೆಳಕು, ಸತ್ಯ ಮತ್ತು ಧನಾತ್ಮಕ ಚಿಂತನೆಯ ಸಂದೇಶವನ್ನು ಸಾರುತ್ತದೆ ಎಂದರು.
ವಿದ್ಯಾರ್ಥಿ ತೌಫೀರಾ ಸ್ವಾಗತಿಸಿ, ತಸ್ಮಯಿ ಅತಿಥಿ ಪರಿಚಯಿಸಿದರು.ಫಾಯೀಝಾ ವಂದಿಸಿದರು. ಸಚಿತ್ ಭಟ್ ನಿರೂಪಿಸಿದರು.

ವಿದ್ಯಾರ್ಥಿಗಳು ಕುಣಿತ ಭಜನೆ, ಸಾಂಸ್ಕೃತಿಕ ನೃತ್ಯ, ದೀಪಾವಳಿ ದಿನಗಳ ವಿಶೇಷತೆಯ ವಾಚನ ಮಾಡಲಾಯಿತು. ಮಕ್ಕಳೇ ರಚಿಸಿದ ಗೂಡುದೀಪಗಳ ಅಲಂಕಾರ, ತಳಿರುತೋರಣ ದೀಪಾವಳಿ ಆಚರಣೆಗೆ ವಿಶೇಷ ಮೆರುಗು ತಂದಿತು.ವಿದ್ಯಾರ್ಥಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಾಳೆ(ಜೂ.21) ನೀಟ್ ಮರು ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
error: Content is protected !!