22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ಉಜಿರೆಯಲ್ಲಿ ಅ.18 ರಂದು ದೀಪಾವಳಿ ಹಬ್ಬ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ದೀಪಾವಳಿಯ ಹಿನ್ನೆಲೆಯನ್ನು ವಿವರಿಸಿದರು.

ಶತಮಾನಗಳಿಂದ ಆಚರಿಸಲಾಗುತ್ತಿರುವ ಈ ಹಬ್ಬ ಜೀವನದಲ್ಲಿ ಹೊಸತನ, ಚೈತನ್ಯ ಮತ್ತು ನೆಮ್ಮದಿಯ ಬೆಳಕನ್ನು ತುಂಬುತ್ತದೆ ಎಂದರು.

ಕಾರ್ಯಕ್ರಮದ ಅತಿಥಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕರು ಕಿರಿಯಾಡಿ ಶ್ರೀಮತಿ ರಾಜೇಶ್ವರಿ ಮಾತನಾಡಿ, ದೀಪಾವಳಿ ಹಬ್ಬವು ಕೇವಲ ಭಾರತದಲ್ಲೇ ಅಲ್ಲ, ವಿಶ್ವದಾದ್ಯಂತ ಸಂತೋಷದಿಂದ ಆಚರಿಸಲಾಗುತ್ತಿರುವ ಹಬ್ಬ. ದೀಪಾವಳಿಯ ಆಚರಣೆಯು ಕೇವಲ ಹಬ್ಬವಲ್ಲ, ನಮ್ಮ ಸಂಸ್ಕೃತಿ ಸಂಸ್ಕಾರ. ನಮ್ಮ ಆಚರಣೆಗಳ ಹಿನ್ನಲೆ ತಿಳಿದುಕೊಂಡು ಆಚರಣೆಗಳನ್ನು ಮುಂದುವರೆಸುತ್ತಾ ಬರುವುದು ನಮ್ಮ ಕರ್ತವ್ಯ ಎಂದರು.

ದೀಪಾವಳಿ ಹಬ್ಬ ಜೀವನದಲ್ಲಿ ಬೆಳಕು, ಸತ್ಯ ಮತ್ತು ಧನಾತ್ಮಕ ಚಿಂತನೆಯ ಸಂದೇಶವನ್ನು ಸಾರುತ್ತದೆ ಎಂದರು.
ವಿದ್ಯಾರ್ಥಿ ತೌಫೀರಾ ಸ್ವಾಗತಿಸಿ, ತಸ್ಮಯಿ ಅತಿಥಿ ಪರಿಚಯಿಸಿದರು.ಫಾಯೀಝಾ ವಂದಿಸಿದರು. ಸಚಿತ್ ಭಟ್ ನಿರೂಪಿಸಿದರು.

ವಿದ್ಯಾರ್ಥಿಗಳು ಕುಣಿತ ಭಜನೆ, ಸಾಂಸ್ಕೃತಿಕ ನೃತ್ಯ, ದೀಪಾವಳಿ ದಿನಗಳ ವಿಶೇಷತೆಯ ವಾಚನ ಮಾಡಲಾಯಿತು. ಮಕ್ಕಳೇ ರಚಿಸಿದ ಗೂಡುದೀಪಗಳ ಅಲಂಕಾರ, ತಳಿರುತೋರಣ ದೀಪಾವಳಿ ಆಚರಣೆಗೆ ವಿಶೇಷ ಮೆರುಗು ತಂದಿತು.ವಿದ್ಯಾರ್ಥಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya
error: Content is protected !!