22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಅ.24ರಂದು ಕಂಚಿಕಾಮಕೋಟಿ ಪೀಠದ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು.

ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ ಮಾಹಿತಿ ಕಚೇರಿ ಬಳಿಯಿಂದ ಭವ್ಯ ಮೆರವಣಿಗೆಯಲ್ಲಿ ಹೆಗ್ಗಡೆಯವರ ನಿವಾಸ ಬೀಡಿಗೆ ತರಲಾಯಿತು.

ಕಂಚಿ ಕಾಮಕೋಟಿ ಸ್ವಾಮೀಜಿಯವರು ತಮ್ಮ  ಪಾದಯಾತ್ರೆಯ ಸಂದರ್ಭದಲ್ಲಿ ಅವಶ್ಯಕ ವಸ್ತುಗಳಾದ ಪಾದುಕೆಗಳನ್ನು, ಅನುಷ್ಠಾನ ಪಾತ್ರೆಗಳನ್ನು ಮತ್ತು ದರ್ಭಾಸನದ ಸಾಗಾಣಿಕೆಗೆ ಇದನ್ನು ಬಳಸುತ್ತಿದ್ದರು.

ಪೂಜ್ಯ ಹೆಗ್ಗಡೆಯವರು ಈ ವಿಶಿಷ್ಟ ಕೊಡುಗೆಯನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

Related posts

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya
error: Content is protected !!