September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಅ.24ರಂದು ಕಂಚಿಕಾಮಕೋಟಿ ಪೀಠದ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು.

ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ ಮಾಹಿತಿ ಕಚೇರಿ ಬಳಿಯಿಂದ ಭವ್ಯ ಮೆರವಣಿಗೆಯಲ್ಲಿ ಹೆಗ್ಗಡೆಯವರ ನಿವಾಸ ಬೀಡಿಗೆ ತರಲಾಯಿತು.

ಕಂಚಿ ಕಾಮಕೋಟಿ ಸ್ವಾಮೀಜಿಯವರು ತಮ್ಮ  ಪಾದಯಾತ್ರೆಯ ಸಂದರ್ಭದಲ್ಲಿ ಅವಶ್ಯಕ ವಸ್ತುಗಳಾದ ಪಾದುಕೆಗಳನ್ನು, ಅನುಷ್ಠಾನ ಪಾತ್ರೆಗಳನ್ನು ಮತ್ತು ದರ್ಭಾಸನದ ಸಾಗಾಣಿಕೆಗೆ ಇದನ್ನು ಬಳಸುತ್ತಿದ್ದರು.

ಪೂಜ್ಯ ಹೆಗ್ಗಡೆಯವರು ಈ ವಿಶಿಷ್ಟ ಕೊಡುಗೆಯನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

Related posts

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya
error: Content is protected !!