September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಮೋಹನ್ ಪಿಬಿ, ಮಹೇಶ್ ಗುತ್ತಿಗಾರು, ನಿಡ್ಲೆಯ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ ಜೈನಾಬಿ, ಬದಿಯಡ್ಕದ ಚಂದ್ರಶೇಖರ್, ಕಡಬದ ಧನಂಜಯ ಮತ್ತು ಯೋಗೀಶ್ ಎರ್ಮಲ್ ರವರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮವನ್ನು ಅ. 20 ದೀಪಾವಳಿ ಹಬ್ಬದಂದು ಸೌತಡ್ಕ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುತ್ತೂರಿನ ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಶ್ರೀಮತಿ ರೂಪಲೇಖರವರು ಗಾಲಿಕುರ್ಚಿಗಳನ್ನು ಹಸ್ತಾಂತರಿಸಿ ಫಲಾನುಭವಿಗಳಿಗೆ ವಿಶ್ವಾಸ ಬದುಕಿಗಾಗಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್, ಬೆನ್ನು ಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಆರೈಕೆದಾರರು, ಫಲಾನುಭವಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 20.16ಲಕ್ಷ ಲಾಭ, ಸದಸ್ಯರಿಗೆ ಶೇ.25 ಡಿವಿಡೆಂಡ್‌

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಮುಳಿಯ “ಸಿಲ್ವರ್ ಮ್ಯಾರಥಾನ್ 2026” ಚಾಲನೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya
error: Content is protected !!