24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

ಕಳಿಯ ಗ್ರಾಮ ಪಂಚಾಯತ್ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ನಾಗರೀಕ ಬಂಧುಗಳ ಸದುಪಯೋಗಕ್ಕಾಗಿ ಆಧಾರ್ ತಿದ್ದುಪಡಿ, ಹತ್ತು ವರ್ಷಗಳ ಅಪ್ಡೇಟ್, ಹದಿನೆಂಟು ವರ್ಷದ ಕೆಳಗಿನ ಹೊಸ ಆಧಾರ್ ಕಾರ್ಡ್, ವಿಳಾಸ ಬದಲಾವಣೆ ಇತ್ಯಾದಿಗಳ ಕ್ಯಾಂಪ್ ಎರಡು ದಿನ ನಡೆಸಲಾಗಿ ಸುಮಾರು ನೂರಕ್ಕೂ ಹೆಚ್ಚು ಮಂದಿಯು ಪ್ರಯೋಜನ ಪಡೆದುಕೊಂಡರು. ಜೊತೆಗೆ ಅಂಚೆ ಇಲಾಖೆಯ ವಿಶಿಷ್ಟ ಪ್ರಜಾ ಸ್ನೇಹಿ ಆರೋಗ್ಯ ವಿಮೆ, ಜೀವ ವಿಮೆ, ಸುಕನ್ಯಾ ಯೋಜನೆಯ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ ನಾಗರೀಕರ ಭಾಗವಹಿಸುವಿಕೆಯಲ್ಲಿ ಯಶಸ್ವಿಯಾಯಿತು.

ಕಾರ್ಯಕ್ರಮದ ಉದ್ಘಾಟನೆ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್ ಮೆದಿನ ನೆರವೇರಿಸಿದರು. ಉಪಾಧ್ಯಕ್ಷೆ ಶ್ರೀಮತಿ ಇಂದಿರಾ, ಗ್ರಾ.ಪಂ. ಸದಸ್ಯರಾದ ವಿಜಯ ಕುಮಾರ್, ಕೆ.ಎಮ್. ಅಬ್ದುಲ್ ಕರೀಮ್, ಹರೀಶ್ ಕುಮಾರ್, ಸುಧಾಕರ ಮಜಲು, ಲತೀಫ್ ಭಾಗವಹಿಸಿದರು.
ಅಂಚೆ ಇಲಾಖೆ ಪುತ್ತೂರು ಅಧಿಕಾರಿ ಗುರುಪ್ರಸಾದ್, ಅಂಚೆ ವಿಭಾಗ ಬೆಳ್ತಂಗಡಿ ಮೇಲ್ವಿಚಾರಕಿ ವಿಮಲ, ಕುವೆಟ್ಟು ಎ.ಬಿ.ಜೆ.ಎಮ್ ಕೆ ಸುಂದರ ಸಾಲಿಯಾನ್, ಶಿರ್ತಾಡಿ ಎ.ಬಿ.ಜೆ.ಎಮ್ ಹರ್ಷಿತ, ಕೊಯ್ಯೂರು ಅಂಚೆ ಪಾಲಕರು ಸಂತೃಪ್ತಿ ಅಂಚೆ ಇಲಾಖಾ ವತಿಯಿಂದ ಭಾಗವಹಿಸಿದರು.


ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಓ ಕುಂಞ ಕೆ ಸ್ವಾಗತಿಸಿ, ನಿರೂಪಿಸಿದರು. ಸಿಬ್ಬಂದಿ ರವಿ ಹೆಚ್ ವಂದಿಸಿದರು. ಸಿಬ್ಬಂದಿಯವರಾದ ಶ್ರೀಮತಿ ಸುಚಿತ್ರ, ಸುರೇಶ್ ಕುಮಾರ್, ಶ್ರೀಮತಿ ಪ್ರಮೀಳಾ, ಶ್ರೀಮತಿ ನಂದಿನಿ P ರೈ, ಶ್ರೀಮತಿ ಶಶಿಕಲಾ ಸಹಕರಿಸಿದರು.

Related posts

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!